ಕೋವಿಡ್ ಸಂದರ್ಭದಲ್ಲಿ ಸುಮಾರು 800ಕ್ಕೂ ಅಧಿಕ ಶ್ವಾನಗಳಿಗೆ ಆಹಾರ ನೀಡಿದ ಮಂಗಳೂರಿನ ಸಮಾಜ ಸೇವಕಿ, ಪ್ರಾಣಿಪ್ರಿಯೆ ರಜನಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಪ್ರಥಮ ಸೇವಾ ಯೋಜನೆಯಾಗಿ ಕೊಡಂಗಲ್ಲಿನ ಬಾಲಕೃಷ್ಣ ನಾಯಕ್ ಅವರಿಗೆ ವಾಕರ್ (ನಡೆಯುವ ಸಾಧನ), ಅನಂತ ಮತಿ ಅವರಿಗೆ ಏರ್ ಬೆಡ್ ಹಸ್ತಾಂತರಿಸಲಾಯಿತು. ತ್ರಿಶೂಲ್ ಫ್ರೆಂಡ್ಸ್ಗೆ ರಜನಿ ಶೆಟ್ಟಿ ₹ 15 ಸಾವಿರ ದೇಣಿಗೆ ನೀಡಿದರು.