ರಕ್ತಹೀನತೆ ತಡೆಗಟ್ಟುವುದು, ಪೌಷ್ಟಿಕತೆಯಲ್ಲಿ ಸುಧಾರಣೆ, ರೋಗ ನಿರೋಧಕ ಶಕ್ತಿ ಹೆಚ್ಚಲು, ಏಕಾಗ್ರತೆ, ಕಲಿಕೆಯ ಶಕ್ತಿ ಹಾಗೂ ಶಾಲಾ ಹಾಜರಾತಿ ಸುಧಾರಿಸಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಸುಶ್ರೂಷಣಾಧಿಕಾರಿ ಡಾ. ಲಿಸ್ಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ, ಆರ್ಸಿಎಚ್ ಅಧಿಕಾರಿ ಡಾ. ರಾಜೇಶ್ ಇದ್ದರು.