<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೊಬ್ಬ ವ್ಯಕ್ತಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19ಕ್ಕೆ ಏರಿದೆ.</p>.<p>ಬೋಳೂರಿನ 58 ವರ್ಷದ ವೃದ್ಧೆ (ಪಿ.536)ಯ ಪ್ರಾಥಮಿಕ ಸಂಪರ್ಕದಿಂದ 51 ವರ್ಷದ ಪುರುಷನಿಗೆ ಕೋವಿಡ್–19 ಇರುವುದು ಮಂಗಳವಾರ ದೃಢಪಟ್ಟಿದೆ. ರೋಗಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿ ಇದ್ದವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಆ ಪೈಕಿ 51 ವರ್ಷದ ಪುರುಷನಿಗೆ ಸೋಂಕು ಇರುವುದು ಖಚಿತವಾಗಿದೆ. ಇವರು ಬೋಳೂರಿನ ನಿವಾಸಿಯಾಗಿದ್ದು, ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.</p>.<p>ಬೋಳೂರಿನ 58 ವರ್ಷದ ಮಹಿಳೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ 15 ದಿನಗಳ ಹಿಂದೆ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಇಲ್ಲಿ ರೋಗಿ ಸಂಖ್ಯೆ 501ರ ಸಂಪರ್ಕಕ್ಕೆ ಬಂದಿದ್ದ ಇವರಿಗೆ ಸೋಂಕು ತಗುಲಿರುವುದು ಖಚಿತವಾಗಿತ್ತು. ಇದಾದ ಬಳಿಕ ಇದೇ 1 ರಂದು ಈ ಮಹಿಳೆಯ 62 ವರ್ಷದ ಪತಿಯಲ್ಲೂ ಸೋಂಕು ದೃಢಪಟ್ಟಿತ್ತು.</p>.<p><strong>ಒಂದೇ ಪ್ರದೇಶದಲ್ಲಿ ಮೂರನೇ ವ್ಯಕ್ತಿಗೆ ಸೋಂಕು:</strong> ಬೋಳೂರು ಪ್ರದೇಶದಲ್ಲಿ ಮೂರನೇ ವ್ಯಕ್ತಿಗೆ ಸೋಂಕು ತಗಲಿದೆ. ಇದರಿಂದಾಗಿ ನಗರ ವ್ಯಾಪ್ತಿಯಲ್ಲಿ ಕೋವಿಡ್–19 ನ ಐದು ಪ್ರಕರಣಗಳು ದೃಢವಾಗಿವೆ.</p>.<p>ಈಗಾಗಲೇ ಬೋಳೂರು, ಶಕ್ತಿನಗರ ಕಕ್ಕೆಬೆಟ್ಟು, ಪಡೀಲ್ನ ಫಸ್ಟ್ ನ್ಯೂರೋ ಆಸ್ಪತ್ರೆಯ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಲಾಗಿದ್ದು, ಇನ್ಸಿಡೆಂಟ್ ಕಮಾಂಡರ್ ನೇತೃತ್ವದಲ್ಲಿ ಅಗತ್ಯ ಸಾಮಗ್ರಿಗಳ ಪೂರೈಕೆ ಮಾಡಲಾಗುತ್ತಿದೆ.</p>.<p><strong>ಇಬ್ಬರ ಸ್ಥಿತಿ ನಾಜೂಕು:</strong> ವೆನ್ಲಾಕ್ ಆಸ್ಪತ್ರೆಯ ವರದಿಯ ಪ್ರಕಾರ ಒಟ್ಟು 10 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. 8 ರೋಗಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕೋವಿಡ್–19 ಸೋಂಕಿಗೆ ಒಳಗಾಗಿರುವ 80 ವರ್ಷದ ವೃದ್ಧೆ ಹಾಗೂ 58 ವರ್ಷದ ವೃದ್ಧೆಯ ಆರೋಗ್ಯ ಸ್ಥಿತಿ ನಾಜೂಕಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.</p>.<p>ಶಕ್ತಿನಗರ ಕಕ್ಕೆಬಟ್ಟು ನಿವಾಸಿ 80 ವರ್ಷದ ವೃದ್ಧೆಯು ಅಧಿಕ ರಕ್ತದೊತ್ತಡ ಹಾಗೂ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಬೋಳೂರಿನ ವೃದ್ಧೆ ಮಿದುಳಿನ ಸೋಂಕಿ (ಕ್ಷಯರೋಗ)ನಿಂದ ಬಳಲುತ್ತಿದ್ದು, ಐಸಿಯುನಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>ಇದುವರೆಗೆ ಜಿಲ್ಲೆಯಿಂದ ಒಟ್ಟು 3,779 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 3,611 ಮಂದಿ ವರದಿ ಜಿಲ್ಲಾಡಳಿತದ ಕೈಸೇರಿದೆ. ಇದರಲ್ಲಿ 3,586 ಮಂದಿಯ ವರದಿ ನೆಗೆಟಿವ್ ಬಂದಿದ್ದು, 25 ಪ್ರಕರಣಗಳಲ್ಲಿ ಸೋಂಕು ದೃಢವಾಗಿದೆ. ಈ ಪೈಕಿ 6 ಜನರು ಹೊರ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೊಬ್ಬ ವ್ಯಕ್ತಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 19ಕ್ಕೆ ಏರಿದೆ.</p>.<p>ಬೋಳೂರಿನ 58 ವರ್ಷದ ವೃದ್ಧೆ (ಪಿ.536)ಯ ಪ್ರಾಥಮಿಕ ಸಂಪರ್ಕದಿಂದ 51 ವರ್ಷದ ಪುರುಷನಿಗೆ ಕೋವಿಡ್–19 ಇರುವುದು ಮಂಗಳವಾರ ದೃಢಪಟ್ಟಿದೆ. ರೋಗಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿ ಇದ್ದವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಆ ಪೈಕಿ 51 ವರ್ಷದ ಪುರುಷನಿಗೆ ಸೋಂಕು ಇರುವುದು ಖಚಿತವಾಗಿದೆ. ಇವರು ಬೋಳೂರಿನ ನಿವಾಸಿಯಾಗಿದ್ದು, ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.</p>.<p>ಬೋಳೂರಿನ 58 ವರ್ಷದ ಮಹಿಳೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ 15 ದಿನಗಳ ಹಿಂದೆ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಇಲ್ಲಿ ರೋಗಿ ಸಂಖ್ಯೆ 501ರ ಸಂಪರ್ಕಕ್ಕೆ ಬಂದಿದ್ದ ಇವರಿಗೆ ಸೋಂಕು ತಗುಲಿರುವುದು ಖಚಿತವಾಗಿತ್ತು. ಇದಾದ ಬಳಿಕ ಇದೇ 1 ರಂದು ಈ ಮಹಿಳೆಯ 62 ವರ್ಷದ ಪತಿಯಲ್ಲೂ ಸೋಂಕು ದೃಢಪಟ್ಟಿತ್ತು.</p>.<p><strong>ಒಂದೇ ಪ್ರದೇಶದಲ್ಲಿ ಮೂರನೇ ವ್ಯಕ್ತಿಗೆ ಸೋಂಕು:</strong> ಬೋಳೂರು ಪ್ರದೇಶದಲ್ಲಿ ಮೂರನೇ ವ್ಯಕ್ತಿಗೆ ಸೋಂಕು ತಗಲಿದೆ. ಇದರಿಂದಾಗಿ ನಗರ ವ್ಯಾಪ್ತಿಯಲ್ಲಿ ಕೋವಿಡ್–19 ನ ಐದು ಪ್ರಕರಣಗಳು ದೃಢವಾಗಿವೆ.</p>.<p>ಈಗಾಗಲೇ ಬೋಳೂರು, ಶಕ್ತಿನಗರ ಕಕ್ಕೆಬೆಟ್ಟು, ಪಡೀಲ್ನ ಫಸ್ಟ್ ನ್ಯೂರೋ ಆಸ್ಪತ್ರೆಯ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಲಾಗಿದ್ದು, ಇನ್ಸಿಡೆಂಟ್ ಕಮಾಂಡರ್ ನೇತೃತ್ವದಲ್ಲಿ ಅಗತ್ಯ ಸಾಮಗ್ರಿಗಳ ಪೂರೈಕೆ ಮಾಡಲಾಗುತ್ತಿದೆ.</p>.<p><strong>ಇಬ್ಬರ ಸ್ಥಿತಿ ನಾಜೂಕು:</strong> ವೆನ್ಲಾಕ್ ಆಸ್ಪತ್ರೆಯ ವರದಿಯ ಪ್ರಕಾರ ಒಟ್ಟು 10 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. 8 ರೋಗಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕೋವಿಡ್–19 ಸೋಂಕಿಗೆ ಒಳಗಾಗಿರುವ 80 ವರ್ಷದ ವೃದ್ಧೆ ಹಾಗೂ 58 ವರ್ಷದ ವೃದ್ಧೆಯ ಆರೋಗ್ಯ ಸ್ಥಿತಿ ನಾಜೂಕಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.</p>.<p>ಶಕ್ತಿನಗರ ಕಕ್ಕೆಬಟ್ಟು ನಿವಾಸಿ 80 ವರ್ಷದ ವೃದ್ಧೆಯು ಅಧಿಕ ರಕ್ತದೊತ್ತಡ ಹಾಗೂ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಬೋಳೂರಿನ ವೃದ್ಧೆ ಮಿದುಳಿನ ಸೋಂಕಿ (ಕ್ಷಯರೋಗ)ನಿಂದ ಬಳಲುತ್ತಿದ್ದು, ಐಸಿಯುನಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>ಇದುವರೆಗೆ ಜಿಲ್ಲೆಯಿಂದ ಒಟ್ಟು 3,779 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 3,611 ಮಂದಿ ವರದಿ ಜಿಲ್ಲಾಡಳಿತದ ಕೈಸೇರಿದೆ. ಇದರಲ್ಲಿ 3,586 ಮಂದಿಯ ವರದಿ ನೆಗೆಟಿವ್ ಬಂದಿದ್ದು, 25 ಪ್ರಕರಣಗಳಲ್ಲಿ ಸೋಂಕು ದೃಢವಾಗಿದೆ. ಈ ಪೈಕಿ 6 ಜನರು ಹೊರ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>