ಶುಕ್ರವಾರ ರಾತ್ರಿ 11.20ಕ್ಕೆ ರಾಸ್ ಅಲ್ ಖೈಮಾ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಿದ ಬಾಡಿಗೆ ವಿಮಾನವು, ಶನಿವಾರ ಬೆಳಿಗ್ಗೆ 4.20 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿತು. ಮೊದಲೇನಿರ್ಧರಿಸಿದಂತೆ ನಗರದ ವಿಮಾನ ನಿಲ್ದಾಣದಲ್ಲಿ ಭಟ್ಕಳ ಮುಸ್ಲಿಮ್ ಜಮಾಅತ್ ಮಂಗಳೂರು ಹಾಗೂ ತಂಝೀಮ್ ಸಂಸ್ಥೆಯ ಉಸ್ತುವಾರಿಯಲ್ಲಿ 4 ಖಾಸಗಿ ಬಸ್ಗಳ ಮೂಲಕ 184 ಮಂದಿಯನ್ನು ಸುರಕ್ಷಿತವಾಗಿ ಭಟ್ಕಳ ಕಳುಹಿಸಲಾಯಿತು. ಇದರಲ್ಲಿ ಗರ್ಭಿಣಿಯರು ಸೇರಿದಂತೆ ಮಕ್ಕಳು, ವಯೋವೃದ್ಧರು ಇದ್ದರು.