ಆದರೆ, ಇದೀಗ ಈ ಯೋಜನೆಯಡಿಯ ಅರ್ಜಿ ಸಲ್ಲಿಸಿದ ರೈತರಿಗೆ ಹೊಸ ಸಂಕಷ್ಟ ಪ್ರಾರಂಭವಾಗಿದೆ. ಆಡಳಿತ ವ್ಯವಸ್ಥೆ ಇದ್ದಾಗ ಅಡಮಾನ ಸಾಲ ನೀಡುವ ಜವಾಬ್ದಾರಿ ಅಧ್ಯಕ್ಷರದ್ದಾಗಿತ್ತು. ಈಗ ಆಡಳಿತ ಅಧಿಕಾರಿಗಳ ಕೈಯಲ್ಲಿದೆ. ಆದರೆ, ಈ ಎಪಿಎಂಸಿಯಿಂದ ಅಮಾನತಾಗಿರುವ ಸಿಬ್ಬಂದಿಯೊಬ್ಬರ ಅಕ್ರಮದಿಂದಾಗಿ ರೈತರ ಅರ್ಜಿಗೆ ಆಡಳಿತಾಧಿಕಾರಿ ಸಹಿ ಬೇಕಾಗಿದೆ. ಪ್ರಸ್ತುತ ಆಡಳಿತಾಧಿಕಾರಿ, ಪುತ್ತೂರು ತಹಶೀಲ್ದಾರ್ ಆಗಿದ್ದು, ಚುನಾವಣೆ ಕಾರಣದಿಂದ ಒತ್ತಡ ಇರುವ ಕಾರಣ ಅಡಿಕೆ ಅಡಮಾನ ಸಾಲಕ್ಕೆ ಬಂದ ಅರ್ಜಿ ವಿಲೇವಾರಿ ತಡವಾಗುತ್ತಿದೆ. ಇದರಿಂದಾಗಿ ರೈತರು ಸಮಸ್ಯೆ ಎದುರಿಸುವಂತಾಗಿದೆ.