ಜಮ್ಮು: ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿನಿಯಂತ್ರಣ ರೇಖೆಯಲ್ಲಿಪಾಕಿಸ್ತಾನ ಸೈನಿಕರು ಮನಬಂದಂತೆ ಗುಂಡಿನ ದಾಳಿ ನಡೆಸಿ ಕದನ
ವಿರಾಮ ಉಲ್ಲಂಘಿಸಿದರು. ಇದಕ್ಕೆ ಪ್ರತಿಯಾಗಿ ಭಾರತದ ಪಡೆಗಳು ದಾಳಿ ನಡೆಸಿವೆ.
‘ಹಲವು ಗಂಟೆಗಳವರೆಗೆ ನಡೆದ ಈ ಘರ್ಷಣೆಯಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ’ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
‘ಭವಾನಿ ಪ್ರದೇಶವನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಸೈನಿಕರು ದಾಳಿ ನಡೆಸಿದರು. ಈ ಮೂಲಕ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನ ಮಾಡಿದರು’ ಎಂದು ಹೇಳಿದ್ದಾರೆ.