<p><strong>ಪುತ್ತೂರು</strong>: ಮನೆಯೊಳಗೆ ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ₹1ಲಕ್ಷ ಮೌಲ್ಯದ ಅಡಿಕೆ ಮತ್ತು ₹10ಸಾವಿರ ನಗದು ಹಣ ಕಳವಾದ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದಲ್ಲಿ ನಡೆದಿದೆ.</p>.<p>ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಸಮೀಪದ ನೆಕ್ಕರೆ ಡಿವೈನ್ ಮರ್ಸಿ ಮನೆಯ ಕಾರ್ಮಿನ್ ಮಿರಾಂದ ಅವರ ಮನೆಯಿಂದ ಅಡಿಕೆ ಕಳವಾಗಿದೆ. ಈ ಬಗ್ಗೆ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>‘ಪತಿ ಸುನಿಲ್ ಮಿರಾಂದ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಾಯಿ ಅವರು ಅವರ ಮನೆಯಲ್ಲಿ ಅಡಿಕೆ ಒಣಗಿಸಲು ಜಾಗ ಇಲ್ಲದೆ ಇರುವುದರಿಂದ ನಮ್ಮ ಮನೆಯ ಅಂಗಳದಲ್ಲಿ ಅಡಿಕೆ ಒಣಗಿಸಿ, ಅಡಿಕೆಯನ್ನು ಸುಲಿದು ತೂಕ ಮಾಡಿ ಇಟ್ಟಿದ್ದರು. ಸುಲಿದ 276 ಕೆ.ಜಿ ಅಡಿಕೆಯನ್ನು 6 ಗೋಣಿಗಳಲ್ಲಿ ತುಂಬಿಸಿ ಮನೆಯ ಎದುರಿನ ಹಾಲ್ನಲ್ಲಿ ಇಡಲಾಗಿತ್ತು. ಈ ಅಡಿಕೆ ಮತ್ತು ಕೆಲಸಗಾರರಿಗೆ ನೀಡಲೆಂದು ಮನೆಯ ಬೆಡ್ ರೂಮಿನ ಕಪಾಟಿನಲ್ಲಿಟ್ಟಿದ್ದ ₹10 ಸಾವಿರ ಹಣ ಕಳವಾಗಿದೆ’ ಎಂದು ಕಾರ್ಮಿನ್ ಮಿರಾಂದ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಪುತ್ರಿಯ ಅನಾರೋಗ್ಯದಿಂದ ಆ.24ರಂದು ಸಂಜೆ ಮನೆಯ ಹಿಂದಿನ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿ, ಮುಂದಿನ ಬಾಗಿಲಿಗೆ ಬೀಗ ಹಾಕಿ ರೋಟರಿಪುರದಲ್ಲಿರುವ ತಾಯಿ ಮನೆಗೆ ಹೋಗಿದ್ದೆ. ಈ ನಡುವೆ ಕಳವು ಆಗಿದೆ ಎಂದು ತಿಳಿಸಿದ್ದಾರೆ. ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಮನೆಯೊಳಗೆ ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ₹1ಲಕ್ಷ ಮೌಲ್ಯದ ಅಡಿಕೆ ಮತ್ತು ₹10ಸಾವಿರ ನಗದು ಹಣ ಕಳವಾದ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದಲ್ಲಿ ನಡೆದಿದೆ.</p>.<p>ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಸಮೀಪದ ನೆಕ್ಕರೆ ಡಿವೈನ್ ಮರ್ಸಿ ಮನೆಯ ಕಾರ್ಮಿನ್ ಮಿರಾಂದ ಅವರ ಮನೆಯಿಂದ ಅಡಿಕೆ ಕಳವಾಗಿದೆ. ಈ ಬಗ್ಗೆ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>‘ಪತಿ ಸುನಿಲ್ ಮಿರಾಂದ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಾಯಿ ಅವರು ಅವರ ಮನೆಯಲ್ಲಿ ಅಡಿಕೆ ಒಣಗಿಸಲು ಜಾಗ ಇಲ್ಲದೆ ಇರುವುದರಿಂದ ನಮ್ಮ ಮನೆಯ ಅಂಗಳದಲ್ಲಿ ಅಡಿಕೆ ಒಣಗಿಸಿ, ಅಡಿಕೆಯನ್ನು ಸುಲಿದು ತೂಕ ಮಾಡಿ ಇಟ್ಟಿದ್ದರು. ಸುಲಿದ 276 ಕೆ.ಜಿ ಅಡಿಕೆಯನ್ನು 6 ಗೋಣಿಗಳಲ್ಲಿ ತುಂಬಿಸಿ ಮನೆಯ ಎದುರಿನ ಹಾಲ್ನಲ್ಲಿ ಇಡಲಾಗಿತ್ತು. ಈ ಅಡಿಕೆ ಮತ್ತು ಕೆಲಸಗಾರರಿಗೆ ನೀಡಲೆಂದು ಮನೆಯ ಬೆಡ್ ರೂಮಿನ ಕಪಾಟಿನಲ್ಲಿಟ್ಟಿದ್ದ ₹10 ಸಾವಿರ ಹಣ ಕಳವಾಗಿದೆ’ ಎಂದು ಕಾರ್ಮಿನ್ ಮಿರಾಂದ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಪುತ್ರಿಯ ಅನಾರೋಗ್ಯದಿಂದ ಆ.24ರಂದು ಸಂಜೆ ಮನೆಯ ಹಿಂದಿನ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿ, ಮುಂದಿನ ಬಾಗಿಲಿಗೆ ಬೀಗ ಹಾಕಿ ರೋಟರಿಪುರದಲ್ಲಿರುವ ತಾಯಿ ಮನೆಗೆ ಹೋಗಿದ್ದೆ. ಈ ನಡುವೆ ಕಳವು ಆಗಿದೆ ಎಂದು ತಿಳಿಸಿದ್ದಾರೆ. ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>