<p><strong>ಮಂಗಳೂರು</strong>: ‘ಯುನಿವೆಫ್ ಕರ್ನಾಟಕ ಸಂಘಟನೆಯು 2022ರ ಅ. 21ರಿಂದ ಹಮ್ಮಿಕೊಂಡಿರುವ ‘ಅರಿಯಿರಿ, ಮನುಕುಲದ ಪ್ರವಾದಿಯನ್ನು’ ಅಭಿಯಾನದ ಸಮಾರೋಪ ಇದೇ 6ರಂದು ಸಂಜೆ 6.45ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ’ ಎಂದು ಸಂಘಟನೆಯ ಅಧ್ಯಕ್ಷ ರಫಿಯುದ್ದೀನ್ ಕುದ್ರೋಳಿ ತಿಳಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಕಾರ್ಯಕ್ರಮದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್, ಮಂಗಳೂರು ಧರ್ಮಪ್ರಾಂತ್ರ್ಯದ ಬಿಷಪ್ ರೆ.ಫಾ.ಪೀಟರ್ ಪಾವ್ಲ್ ಸಲ್ದಾನ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು</p>.<p>‘77 ದಿನಗಳ ಕಾಲ ನಡೆದ ಈ ಅಭಿಯಾನದಲ್ಲಿ ವಕೀಲರ ಜೊತೆ ಹಾಗೂ ಶಿಕ್ಷಕರ ಜೊತೆ ಸಮಾಲೋಚನೆ ನಡೆಸುವ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದೆವು. ವಾಹನ ಜಾಥಾವು 4 ಸಾವಿರ ಕಿ.ಮೀ ಸಂಚರಿಸಿದೆ. ಎಲ್ಲರಿಗೂ ಸಲ್ಲುವ ಪ್ರವಾದಿಯವರ ನಿಂದನೆ ನಡೆದಾಗ ವಾಸ್ತವವನ್ನು ತಿಳಿಸು ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಂಡಿದ್ದೇವೆ. ಎಲ್ಲ ಧರ್ಮದವರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ’ ಎಂದರು.</p>.<p>ಮುಸ್ಲಿಂ ಧರ್ಮದ ವಿರುದ್ಧ ದ್ವೇಷ ಬಿತ್ತುವವರನ್ನೂ ಸಂಪರ್ಕಿಸಿ ಮನಪರಿವರ್ತನೆಗೆ ಯತ್ನಿಸಿದ್ದೀರಾ ಎಂಬ ಪ್ರಶ್ನೆಗೆ, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವರು ರಾಜಕೀಯ ಹಿತಾಸಕ್ತಿಯಿಂದ ಉದ್ದೇಶಪೂರ್ವಕವಾಗಿ ಧಾರ್ಮಿಕ ವಿಷಬೀಜ ಬಿತ್ತಿ ಮನಸುಗಳನ್ನು ಮಲಿನಗೊಳಿಸುತ್ತಿದ್ದಾರೆ. ಅಂತಹವರಿಗೆ ಪ್ರವಾದಿಯವರ ಚಿಂತನೆಗಳನ್ನು ತಿಳಿಸುವ ಅಗತ್ಯ ಕಾಣಿಸುತ್ತಿಲ್ಲ’ ಎಂದರು. </p>.<p>ಸುದ್ದಿಗೋಷ್ಠಿಯಲ್ಲಿ ಅಭಿಯಾನದ ಸಹ ಸಂಚಾಲಕರಾದ ಉಬೇದುಲ್ಲಾ ಬಂಟ್ವಾಳ, ಆಸಿಫ್ ಕುದ್ರೋಳಿ, ಹನೀಫ್ ಮಂಗಳೂರು, ಅಬ್ದುಲ್ ರಶೀದ್ ಬಂದರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಯುನಿವೆಫ್ ಕರ್ನಾಟಕ ಸಂಘಟನೆಯು 2022ರ ಅ. 21ರಿಂದ ಹಮ್ಮಿಕೊಂಡಿರುವ ‘ಅರಿಯಿರಿ, ಮನುಕುಲದ ಪ್ರವಾದಿಯನ್ನು’ ಅಭಿಯಾನದ ಸಮಾರೋಪ ಇದೇ 6ರಂದು ಸಂಜೆ 6.45ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ’ ಎಂದು ಸಂಘಟನೆಯ ಅಧ್ಯಕ್ಷ ರಫಿಯುದ್ದೀನ್ ಕುದ್ರೋಳಿ ತಿಳಿಸಿದರು.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಕಾರ್ಯಕ್ರಮದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್, ಮಂಗಳೂರು ಧರ್ಮಪ್ರಾಂತ್ರ್ಯದ ಬಿಷಪ್ ರೆ.ಫಾ.ಪೀಟರ್ ಪಾವ್ಲ್ ಸಲ್ದಾನ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು</p>.<p>‘77 ದಿನಗಳ ಕಾಲ ನಡೆದ ಈ ಅಭಿಯಾನದಲ್ಲಿ ವಕೀಲರ ಜೊತೆ ಹಾಗೂ ಶಿಕ್ಷಕರ ಜೊತೆ ಸಮಾಲೋಚನೆ ನಡೆಸುವ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದೆವು. ವಾಹನ ಜಾಥಾವು 4 ಸಾವಿರ ಕಿ.ಮೀ ಸಂಚರಿಸಿದೆ. ಎಲ್ಲರಿಗೂ ಸಲ್ಲುವ ಪ್ರವಾದಿಯವರ ನಿಂದನೆ ನಡೆದಾಗ ವಾಸ್ತವವನ್ನು ತಿಳಿಸು ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಂಡಿದ್ದೇವೆ. ಎಲ್ಲ ಧರ್ಮದವರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ’ ಎಂದರು.</p>.<p>ಮುಸ್ಲಿಂ ಧರ್ಮದ ವಿರುದ್ಧ ದ್ವೇಷ ಬಿತ್ತುವವರನ್ನೂ ಸಂಪರ್ಕಿಸಿ ಮನಪರಿವರ್ತನೆಗೆ ಯತ್ನಿಸಿದ್ದೀರಾ ಎಂಬ ಪ್ರಶ್ನೆಗೆ, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವರು ರಾಜಕೀಯ ಹಿತಾಸಕ್ತಿಯಿಂದ ಉದ್ದೇಶಪೂರ್ವಕವಾಗಿ ಧಾರ್ಮಿಕ ವಿಷಬೀಜ ಬಿತ್ತಿ ಮನಸುಗಳನ್ನು ಮಲಿನಗೊಳಿಸುತ್ತಿದ್ದಾರೆ. ಅಂತಹವರಿಗೆ ಪ್ರವಾದಿಯವರ ಚಿಂತನೆಗಳನ್ನು ತಿಳಿಸುವ ಅಗತ್ಯ ಕಾಣಿಸುತ್ತಿಲ್ಲ’ ಎಂದರು. </p>.<p>ಸುದ್ದಿಗೋಷ್ಠಿಯಲ್ಲಿ ಅಭಿಯಾನದ ಸಹ ಸಂಚಾಲಕರಾದ ಉಬೇದುಲ್ಲಾ ಬಂಟ್ವಾಳ, ಆಸಿಫ್ ಕುದ್ರೋಳಿ, ಹನೀಫ್ ಮಂಗಳೂರು, ಅಬ್ದುಲ್ ರಶೀದ್ ಬಂದರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>