ಡಿ. 14ರಂದು ಬಡಗ ಎಡಪದವು ಗ್ರಾಮದ ಕಿನ್ನಿಮಜಲು ನಿವಾಸಿ ಚಂದನ್ ಉಪಾಧ್ಯಾಯ ಎಂಬವರು ಮೇಯಲು ಬಿಟ್ಟ 2 ಹಸು ಮತ್ತು 1 ಕರುವನ್ನು ಗೋಕಳ್ಳರು ಕಳವು ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು. ತೆಂಕ ಎಡಪದವು ಗ್ರಾಮದ ದಡ್ಡಿ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಆರೋಪಿಗಳಾದ ನಾಸೀರ್ ಯಾನೆ ನಾಚಿ ಮತ್ತು ಪಡುಕೊಣಾಜೆ ಗ್ರಾಮ ನೀರಲ್ಕೆ ನಿವಾಸಿ ಇಮ್ರಾನ್ ಯಾನೆ ಇಬ್ರಾಹಿಂನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.