ನಗರದ ಪಂಪ್ ವೆಲ್ ವೃತ್ತಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ 'ಮಹಾವೀರ' ವೃತ್ತ ಎಂದು ನಾಮಕರಣ ಮಾಡಲಾಗಿದೆ. ಈ ವೃತ್ತಕ್ಕೆ 'ಸಾವರ್ಕರ್' ಹೆಸರು ಎಂದು ಬ್ಯಾನರ್ ಹಾಕುವ ಮೂಲಕ ಕಿಡಿಗೇಡಿಗಳು ನಾಡಿಗೆ ಅವಮಾನ ಮಾಡಿದ್ದಾರೆ. ಈ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡಿದ ಮುಖಂಡರು, ಸಂಘಟನೆ, ಬ್ಯಾನರ್ ಮುದ್ರಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದರು.