‘ಕಲೆಯನ್ನು ನಂಬಿಕೊಂಡ ನೂರಾರು ಕುಟುಂಬಗಳು ಇವೆ. ಒಂದೂವರೆ ವರ್ಷದಿಂದ ಪ್ರದರ್ಶನ ಇಲ್ಲದೆ, ಕಲಾವಿದರು ನಿರ್ಗತಿಕರಾಗಿದ್ದಾರೆ. ಜಿಲ್ಲೆಯಲ್ಲಿ 30ಕ್ಕೂ ಮಿಕ್ಕಿ ನಾಟಕ ತಂಡಗಳು, 5,000ಕ್ಕೂ ಹೆಚ್ಚು ಕಲಾವಿದರು ಇದ್ದಾರೆ. ಕಲಾವಿದರು ಸಂಕಷ್ಟದಲ್ಲಿದ್ದಾಗ ಸರ್ಕಾರ ನೆರವಾಗಿಲ್ಲ. ನಮಗೆ ನಾಟಕ ಪ್ರದರ್ಶನ, ಸಿನಿಮಾ ಮಂದಿರಗಳಲ್ಲಿ ಪೂರ್ಣ ಪ್ರಮಾಣದ ಅವಕಾಶ ನೀಡಿ, ಕಲಾವಿದರ ಕುಟುಂಬಕ್ಕೆ ನೆರವಾಗಬೇಕು’ ಎಂದು ದೇವದಾಸ್ ಕಾಪಿಕಾಡ್ ತಿಳಿಸಿದರು.