‘ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಹಾವೇರಿ, ಚಾಮರಾಜನಗರ ಜಿಲ್ಲೆಗಳಲ್ಲಿ ಒಟ್ಟು 56.59 ಲಕ್ಷ ಜನರನ್ನು ತಪಾಸಣೆ ಮಾಡಲಾಗಿದ್ದು, ಇವರಲ್ಲಿ 8.28 ಲಕ್ಷ ಜನರಿಗೆ ನೇತ್ರ ಸಂಬಂಧಿ ತೊಂದರೆ ಇರುವುದು ಗಮನಕ್ಕೆ ಬಂದಿದೆ. ದ್ವಿತೀಯ ಹಂತದ ತಪಾಸಣೆಗೆ ಒಳಪಡಿಸಿದಾಗ 2.45 ಲಕ್ಷ ಮಂದಿಗೆ ದೃಷ್ಟಿದೋಷ ಕಂಡುಬಂದಿದ್ದು, ಅವರಿಗೆ ಉಚಿತವಾಗಿ ಕನ್ನಡಕಗಳನ್ನು ಒದಗಿಸಲಾಗುತ್ತದೆ. 39,336 ಜನರಿಗೆ ಕಣ್ಣಿನ ಪೊರೆ ಸಮಸ್ಯೆ ಇರುವುದು ಕಂಡುಬಂದಿದ್ದು, ಅವರಿಗೆ ಸರ್ಕಾರಿ ಆಸ್ಪತ್ರೆ ಅಥವಾ ನೋಂದಾಯಿತ ಸ್ವಯಂ ಸೇವಾ ಸಂಸ್ಥೆಗಳ ಆಸ್ಪತ್ರೆಗಳಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಲಾಗುತ್ತದೆ. ಬರುವ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಈ ಯೋಜನೆ ವಿಸ್ತರಿಸಲಾಗುವುದು’ ಎಂದು ಹೇಳಿದರು.