‘ಅಶೋಕ ನಗರದ ಪಾಳು ಬಾವಿಯನ್ನು ಮುಚ್ಚಿ ಕಟ್ಟಡ ನಿರ್ಮಿಸುವ ಸಿದ್ಧತೆ ನಡೆದಿತ್ತು. ಕಾರ್ಮಿಕರು ಬಾವಿಯಲ್ಲಿ ಹೆಬ್ಬಾವು ಇರುವುದನ್ನು ನೋಡಿ ನಮ್ಮ ಗಮನಕ್ಕೆ ತಂದಿದ್ದರು. ನಾವು ಸ್ಥಳಕ್ಕೆ ಹೋಗಿ ನೋಡಿದಾಗ, ಬಾವಿಯೊಳಗೆ ಮೂರು ಹೆಬ್ಬಾವುಗಳಿರುವುದು ಕಂಡು ಬಂತು. ನಾನು, ಜೀತ್ ಮಿಲನ್ ಹಾಗೂ ಅಜಯ್ ಕುಲಾಲ್ ಸೇರಿ ಎರಡು ಹೆಬ್ಬಾವುಗಳನ್ನು ಶನಿವಾರ ಸಂರಕ್ಷಣೆ ಮಾಡಿದ್ದೇವೆ’ ಎಂದು ಭುವನ್ ‘ಪ್ರಜಾವಾಣಿ’ಗೆ ತಿಳಿಸಿದರು.