<p>ಮಂಗಳೂರು: ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಸಮುದಾಯವನ್ನು ನುಸುಳುಕೋರರು ಎಂದು ಹೇಳಿದ್ದು ಸಮಂಜಸವೇ? ಪ್ರಧಾನಿ ಹುದ್ದೆಯ ಘನತೆಗೆ ವಿರುದ್ಧವಾಗಿ ಅವರು ಮಾತನಾಡಿದ್ದಾರೆ ಎಂದು ಎಐಸಿಸಿ ಸಂವಹನ ಸಂಯೋಜಕ (ವಾರ್ ರೂಂ) ಅಶ್ವಿನ್ ಕುಮಾರ್ ರೈ ಹೇಳಿದರು.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 2006ರಲ್ಲಿ ನೀಡಿರುವ ಹೇಳಿಕೆಯ ತುಣುಕೊಂದನ್ನು ಪ್ರಧಾನಿ ಈಗ ತಮ್ಮ ಚುನಾವಣಾ ಪ್ರಚಾರದಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಸಂದರ್ಭದಲ್ಲಿ ಬಂದ ವರದಿಯೊಂದನ್ನು ಆಧರಿಸಿ, ಮನಮೋಹನ್ ಸಿಂಗ್ ಅವರು, ಪರಿಶಿಷ್ಟ ಜಾತಿ- ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಆರ್ಥಿಕವಾಗಿ ಹಿಂದುಳಿದವರಿಗೆ ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದರ ಒಂದು ವಾಕ್ಯವನ್ನು ಬಳಸಿ, ಜನರಿಗೆ ತಪ್ಪು ಸಂದೇಶ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ದೇಶದಲ್ಲಿ ಎದುರಾಗಿರುವ ನಿರುದ್ಯೋಗ ಸಮಸ್ಯೆ, ಬಡತನ, ಸಂಪತ್ತಿನ ಅಸಮಾನ ಹಂಚಿಕೆಯ ಬಗ್ಗೆ ಪ್ರಧಾನಿ ಮಾತನಾಡುತ್ತಿಲ್ಲ. ಒಂದು ಸಮುದಾಯವನ್ನು ಗುರಿಯಾಗಿಟ್ಟು ಮಾತನಾಡಿದರೆ, ಆ ಸಮುದಾಯ ಮುಖ್ಯವಾಹಿನಿಗೆ ಬರುವುದಾದರೂ ಹೇಗೆ? ವಿಭಜನೆಯ ಮಾತು ರಾಷ್ಟ್ರದ ಏಕತೆಗೆ ಪೂರಕವಲ್ಲ. ಚುನಾವಣೆಯ ರಾಜಕೀಯಕ್ಕಾಗಿ ಈ ಮಟ್ಟಕ್ಕೆ ಇಳಿದು ಮಾತನಾಡಬಾರದು ಎಂದು ಅವರು ಹೇಳಿದರು.</p>.<p>ಪ್ರಮುಖರಾದ ಮಹಾಬಲ ಮಾರ್ಲ, ಶುಭೋದಯ ಆಳ್ವ, ನಝೀರ್ ಬಜಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಸಮುದಾಯವನ್ನು ನುಸುಳುಕೋರರು ಎಂದು ಹೇಳಿದ್ದು ಸಮಂಜಸವೇ? ಪ್ರಧಾನಿ ಹುದ್ದೆಯ ಘನತೆಗೆ ವಿರುದ್ಧವಾಗಿ ಅವರು ಮಾತನಾಡಿದ್ದಾರೆ ಎಂದು ಎಐಸಿಸಿ ಸಂವಹನ ಸಂಯೋಜಕ (ವಾರ್ ರೂಂ) ಅಶ್ವಿನ್ ಕುಮಾರ್ ರೈ ಹೇಳಿದರು.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 2006ರಲ್ಲಿ ನೀಡಿರುವ ಹೇಳಿಕೆಯ ತುಣುಕೊಂದನ್ನು ಪ್ರಧಾನಿ ಈಗ ತಮ್ಮ ಚುನಾವಣಾ ಪ್ರಚಾರದಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಸಂದರ್ಭದಲ್ಲಿ ಬಂದ ವರದಿಯೊಂದನ್ನು ಆಧರಿಸಿ, ಮನಮೋಹನ್ ಸಿಂಗ್ ಅವರು, ಪರಿಶಿಷ್ಟ ಜಾತಿ- ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಆರ್ಥಿಕವಾಗಿ ಹಿಂದುಳಿದವರಿಗೆ ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದರ ಒಂದು ವಾಕ್ಯವನ್ನು ಬಳಸಿ, ಜನರಿಗೆ ತಪ್ಪು ಸಂದೇಶ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ದೇಶದಲ್ಲಿ ಎದುರಾಗಿರುವ ನಿರುದ್ಯೋಗ ಸಮಸ್ಯೆ, ಬಡತನ, ಸಂಪತ್ತಿನ ಅಸಮಾನ ಹಂಚಿಕೆಯ ಬಗ್ಗೆ ಪ್ರಧಾನಿ ಮಾತನಾಡುತ್ತಿಲ್ಲ. ಒಂದು ಸಮುದಾಯವನ್ನು ಗುರಿಯಾಗಿಟ್ಟು ಮಾತನಾಡಿದರೆ, ಆ ಸಮುದಾಯ ಮುಖ್ಯವಾಹಿನಿಗೆ ಬರುವುದಾದರೂ ಹೇಗೆ? ವಿಭಜನೆಯ ಮಾತು ರಾಷ್ಟ್ರದ ಏಕತೆಗೆ ಪೂರಕವಲ್ಲ. ಚುನಾವಣೆಯ ರಾಜಕೀಯಕ್ಕಾಗಿ ಈ ಮಟ್ಟಕ್ಕೆ ಇಳಿದು ಮಾತನಾಡಬಾರದು ಎಂದು ಅವರು ಹೇಳಿದರು.</p>.<p>ಪ್ರಮುಖರಾದ ಮಹಾಬಲ ಮಾರ್ಲ, ಶುಭೋದಯ ಆಳ್ವ, ನಝೀರ್ ಬಜಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>