ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 2006ರಲ್ಲಿ ನೀಡಿರುವ ಹೇಳಿಕೆಯ ತುಣುಕೊಂದನ್ನು ಪ್ರಧಾನಿ ಈಗ ತಮ್ಮ ಚುನಾವಣಾ ಪ್ರಚಾರದಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆ ಸಂದರ್ಭದಲ್ಲಿ ಬಂದ ವರದಿಯೊಂದನ್ನು ಆಧರಿಸಿ, ಮನಮೋಹನ್ ಸಿಂಗ್ ಅವರು, ಪರಿಶಿಷ್ಟ ಜಾತಿ- ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಆರ್ಥಿಕವಾಗಿ ಹಿಂದುಳಿದವರಿಗೆ ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದರ ಒಂದು ವಾಕ್ಯವನ್ನು ಬಳಸಿ, ಜನರಿಗೆ ತಪ್ಪು ಸಂದೇಶ ನೀಡಲಾಗುತ್ತಿದೆ’ ಎಂದು ಆರೋಪಿಸಿದರು.