ವಾರದ ಹಿಂದೆ ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಅವರು ಬಿದ್ದು ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು, ನಂತರ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಈಗ ಅವರ ಸಹಜ ಉಸಿರಾಟದಲ್ಲಿ ಅಲ್ಪ ಸುಧಾರಣೆ ಕಂಡಿದೆ. ಕುಟುಂಬಸ್ಥರ ಮಾತಿಗೆ ಕೈ ಚಲನೆಯ ಮೂಲಕ ಸ್ಪಂದಿಸುತ್ತಿದ್ದಾರೆ. ರಕ್ತದೊತ್ತಡ ಬಹುತೇಕ ಸಹಜ ಸ್ಥಿತಿಗೆ ಬಂದಿದೆ. ಆದರೆ, ಅವರಿಗೆ ಶಸ್ತ್ರಚಿಕಿತ್ಸೆ ನಡೆಸುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.