ಕೆಮ್ಮಿಂಜೆ ಗ್ರಾಮದ ಮಹಮ್ಮದ್ ಜುಬೇರ್ ಅವರು ಘಟನೆ ಕುರಿತು ದೂರು ನೀಡಿದ್ದಾರೆ. ‘ಮಾರ್ಚ್ 28ರಂದು ರಾತ್ರಿ ವೇಳೆ ನಾನು, ತಂದೆ ಆದಂ ಅವರೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ತಿಂಗಳಾಡಿಯ ಸಿದ್ದಿಕ್ ಅನ್ಸಾರ್ ಮತ್ತು ಕೆಮ್ಮಿಂಜೆ ಗ್ರಾಮದ ಶಮೀರ್ ಕಾರೊಂದರಲ್ಲಿ ಬಂದು ನಮ್ಮಿಬ್ಬರನ್ನು ಅಡ್ಡಗಟ್ಟಿ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.