<p><strong>ಮಂಗಳೂರು:</strong> ನಂತೂರಿನಲ್ಲಿ ಹಿಂದೂ ಯುವತಿಯ ಜೊತೆಗೆ ಪ್ರಯಣಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ನಗರದ ನಂತೂರು ಜಂಕ್ಷನ್ ಬಳಿ ಗುರುವಾರ ಸಂಜೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಹಲ್ಲೆಗೊಳಗಾದ ಯುವಕನನ್ನು ಕಾರ್ಕಳ ತಾಲ್ಲೂಕಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ (20) ಎಂದು ಗುರುತಿಸಲಾಗಿದೆ.</p>.<p>ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ರಶೀಮ್ ಅವರು ಯುವತಿಯೊಬ್ಬರ ಜೊತೆ ಪ್ರಯಾಣಿಸುತ್ತಿದ್ದರು.</p>.<p>‘ಬಸ್ ನಂತೂರು ಜಂಕ್ಷನ್ ತಲುಪಿದಾಗ ನಾಲ್ಕೈದು ಯುವಕರು ಬಸ್ಸಿನೊಳಗೆ ನುಗ್ಗಿ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ಬೈದರು. ಬಸ್ನಿಂದ ಕೆಳಗೆ ಇಳಿಸಿ ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿದರು. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದರು‘ ಎಂದು ಸೈಯದ್ ರಶೀಮ್ ಉಮರ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಈ ಘಟನೆ ಕುರಿತ ಟ್ವೀಟ್ ಒಂದಕ್ಕೆ ಪ್ರತಿಕ್ರಿಯಿಸಿರುವ ಎಡಿಜಿಪಿ (ಕಾನೂನು ಸುವ್ಯವಸ್ಥೆ) ಅಲೋಕ್ ಕುಮಾರ್, ‘ಈ ಘಟನೆಗೆ ಸಂಬಂಧಿಸಿ ಕ್ರಮಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಂತೂರಿನಲ್ಲಿ ಹಿಂದೂ ಯುವತಿಯ ಜೊತೆಗೆ ಪ್ರಯಣಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ನಗರದ ನಂತೂರು ಜಂಕ್ಷನ್ ಬಳಿ ಗುರುವಾರ ಸಂಜೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಹಲ್ಲೆಗೊಳಗಾದ ಯುವಕನನ್ನು ಕಾರ್ಕಳ ತಾಲ್ಲೂಕಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ (20) ಎಂದು ಗುರುತಿಸಲಾಗಿದೆ.</p>.<p>ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ರಶೀಮ್ ಅವರು ಯುವತಿಯೊಬ್ಬರ ಜೊತೆ ಪ್ರಯಾಣಿಸುತ್ತಿದ್ದರು.</p>.<p>‘ಬಸ್ ನಂತೂರು ಜಂಕ್ಷನ್ ತಲುಪಿದಾಗ ನಾಲ್ಕೈದು ಯುವಕರು ಬಸ್ಸಿನೊಳಗೆ ನುಗ್ಗಿ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ಬೈದರು. ಬಸ್ನಿಂದ ಕೆಳಗೆ ಇಳಿಸಿ ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿದರು. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದರು‘ ಎಂದು ಸೈಯದ್ ರಶೀಮ್ ಉಮರ್ ದೂರಿನಲ್ಲಿ ತಿಳಿಸಿದ್ದಾರೆ.</p>.<p>ಈ ಘಟನೆ ಕುರಿತ ಟ್ವೀಟ್ ಒಂದಕ್ಕೆ ಪ್ರತಿಕ್ರಿಯಿಸಿರುವ ಎಡಿಜಿಪಿ (ಕಾನೂನು ಸುವ್ಯವಸ್ಥೆ) ಅಲೋಕ್ ಕುಮಾರ್, ‘ಈ ಘಟನೆಗೆ ಸಂಬಂಧಿಸಿ ಕ್ರಮಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>