ಅಝರುದ್ದೀನ್ ಮತ್ತು ರಿಯಾಝ್ ಹೆಲ್ಮೆಟ್ ಧರಿಸದೆ, ನೋಂದಣಿ ಸಂಖ್ಯೆ ಇಲ್ಲದ ಬೈಕಿನಲ್ಲಿ ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದರು. ಇದನ್ನು ಗಮನಿಸಿದ ಸಂಗಣ್ಣ ಗೌಡ ಮೊಬೈಲ್ ಮೂಲಕ ಫೋಟೊ ತೆಗೆದಿದ್ದರು. ಇದರಿಂದ ಕುಪಿತಗೊಂಡ ಸವಾರರಿಬ್ಬರು ಬೈಕ್ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ , ಪೇದೆಯ ಎಡಕೆನ್ನೆ, ಎದೆಯ ಭಾಗಕ್ಕೆ ಕೈಯಲ್ಲಿ ಹಲ್ಲೆ ನಡೆಸಿದ್ದರು. ಕೈಕಾಲು ಮುರಿದು ಕೊಲ್ಲುವ ಬೆದರಿಕೆಯನ್ನೂ ಒಡ್ಡಿದ್ದರು. ಗಾಯಗೊಂಡ ಸಂಗಣ್ಣ ಗೌಡ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ.