ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಂಪತಿ ಮೇಲೆ ಹಲ್ಲೆ: ಇಬ್ಬರ ಬಂಧನ

Last Updated 7 ಮೇ 2022, 16:05 IST
ಅಕ್ಷರ ಗಾತ್ರ

ಮಂಗಳೂರು: ಅತ್ತಾವರದ ಬಳಿ ದಂಪತಿ ಹಾಗೂ ಮಗುವಿನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಿಶ್ವನಾಥ್ ಮತ್ತು ಮಧುಸೂದನ್ ಬಂಧಿತರು. ಅತ್ತಾವರದ ಅಂಬಿಕಾ ಮ್ಯಾನ್ಶನ್ ಅಪಾರ್ಟ್‌ಮೆಂಟ್‌ ಬಳಿ ಕಸ ಹಾಕುವ ವಿಷಯಕ್ಕೆ ಸಂಬಂಧಿಸಿ ಮೇ 4ರಂದು ಬಿಪುಲ್ ಕುಮಾರ್ ಎಂಬುವವರ ಮೇಲೆ, ಬಿಶ್ವನಾಥ್, ಮಧುಸೂದನ್, ಅಮೃತಾ, ರಾಜೇಶ್, ನೀರಜ್ ಎಂಬುವವರು ಹಲ್ಲೆ ನಡೆಸಿದ್ದಾರೆ. ಬಿಶ್ವನಾಥ ಮತ್ತು ಅಮೃತಾ ದಂಪತಿ ಸೇರಿ, ಹೊರಗಿನಿಂದ ಜನರನ್ನು ಕರೆಸಿ ಬಡ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

ಬಿಪುಲ್‌ಕುಮಾರ್ ದಂಪತಿ ಮತ್ತು ಅವರ 8 ವರ್ಷದ ಮಗುವಿನ ಮೇಲೆ ಕೂಡ ಹಲ್ಲೆ ನಡೆಸಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಪತ್ತೆಯಾಗಿದೆ. ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಇತರ ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT