ಕುದ್ರೋಳಿಯ ರಶೀದ್ ಅವರು ತಮ್ಮ ರಿಕ್ಷಾದಲ್ಲಿ ಕಂಕನಾಡಿ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಹೊಂದಿರುವ ಝಾಕೀರ್ ಅವರ ಅಂಗಡಿಗೆ ಸುಮಾರು 200 ಕೆ.ಜಿ.ಯಷ್ಟು ದನದ ಮಾಂಸವನ್ನು ಸಾಗಣೆ ಮಾಡುತ್ತಿದ್ದರು. ಈ ವೇಳೆ ಸುಮಾರು ಐದಾರು ಮಂದಿಯ ತಂಡ ಕಾರು ಮತ್ತು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದಿದ್ದು, ಹೈಲ್ಯಾಂಡ್ ಆಸ್ಪತ್ರೆ ಮತ್ತು ಕಂಕನಾಡಿ ಮಾರುಕಟ್ಟೆ ರಸ್ತೆ ಮಧ್ಯೆ ರಿಕ್ಷಾ ತಡೆದು ನಿಲ್ಲಿಸಿತು.