ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುರತ್ಕಲ್ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ಕಾನೂನಿನ ಭಯವಿಲ್ಲದೆ ರೌಡಿಗಳು, ಆಡಳಿತ ಪಕ್ಷದ ಕುಮ್ಮಕ್ಕಿನಿಂದ ಈ ರೀತಿ ಕೃತ್ಯ ನಡೆಸುತ್ತಿದ್ದಾರೆ. ಪೊಲೀಸ್ ಇಲಾಖೆ ಆಡಳಿತ ಪಕ್ಷದ ಅಡಿಯಾಳಾಗದೆ, ಕಾನೂನಿನ ಮೂಲಕ ದುಷ್ಕರ್ಮಿಗಳ ಮೇಲೆ ಕ್ರಮವಹಿಸಬೇಕು’ ಎಂದರು.