ಪ್ರಕರಣ ವಿವರ: 2019ರ ಫೆಬ್ರುವರಿ 20ರಂದು ರಾತ್ರಿ ಆರೋಪಿ ಶಿವಕುಮಾರ್, ಪತ್ನಿ ಸಾಕಮ್ಮ (39) ಮತ್ತು ಪುತ್ರಿಗೆ ಹೀನಾಯವಾಗಿ ನಿಂದಿಸಿದ್ದ. ಈ ಸಂದರ್ಭದಲ್ಲಿ ಸಾಕಮ್ಮ ಮನೆಯಿಂದ ಹೊರಗೆ ಬಂದಾಗ ಶಿವಕುಮಾರ್ ಆಕೆಯ ಎರಡೂ ಕೈ ಮತ್ತು ಕಾಲುಗಳಿಗೆ ಕಬ್ಬಿಣದ ಸರಳಿನಿಂದ ತೀವ್ರವಾಗಿ ಹೊಡೆದಿದ್ದ ಎಂದು ಆರೋಪಿಸಲಾಗಿತ್ತು. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.