ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ನಜೀರ್, ತಾನು ಪ್ರೀತಿಸುತ್ತಿದ್ದ ಅನ್ಯ ಕೋಮಿನ ಯುವತಿಯೊಂದಿಗೆ ಉಪ್ಪಿನಂಗಡಿಯಿಂದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಕಡಬ ತಾಲ್ಲೂಕಿನ ಸಿರಿಬಾಗಿಲು ಗ್ರಾಮದ ದೇರಣೆ ತಲುಪಿದಾಗ, ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್ ಮತ್ತು ಇತರ ಆರೋಪಿಗಳು, ಅಟೋರಿಕ್ಷಾವನ್ನು ತಡೆದು ನಿಲ್ಲಿಸಿದ್ದಾರೆ.