ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ಯ ಕೋಮಿನ ಯುವತಿ ಜೊತೆ ಸಂಚಾರ; ಹಲ್ಲೆ- ಪ್ರಕರಣ ದಾಖಲು

Last Updated 5 ಏಪ್ರಿಲ್ 2022, 16:25 IST
ಅಕ್ಷರ ಗಾತ್ರ

ಕಡಬ (ಉಪ್ಪಿನಂಗಡಿ): ಅನ್ಯ ಕೋಮಿನ ಯುವತಿಯೊಂದಿಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕಡಬ ತಾಲ್ಲೂಕಿನ ಸಿರಿಬಾಗಿಲು ಗ್ರಾಮದ ದೇರಣೆ ಬಳಿ ನಡೆದಿದೆ. ಈ ಕುರಿತು ಹಲ್ಲೆಗೆ ಒಳಗಾದ ಯುವಕ ನಜೀರ್ ನೀಡಿದ ದೂರಿನ ಆಧಾರದಲ್ಲಿ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ನಜೀರ್, ತಾನು ಪ್ರೀತಿಸುತ್ತಿದ್ದ ಅನ್ಯ ಕೋಮಿನ ಯುವತಿಯೊಂದಿಗೆ ಉಪ್ಪಿನಂಗಡಿಯಿಂದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಕಡಬ ತಾಲ್ಲೂಕಿನ ಸಿರಿಬಾಗಿಲು ಗ್ರಾಮದ ದೇರಣೆ ತಲುಪಿದಾಗ, ಸುರೇಂದ್ರ, ತೀರ್ಥಪ್ರಸಾದ್‌, ಜಿತೇಶ್‌ ಮತ್ತು ಇತರ ಆರೋಪಿಗಳು, ಅಟೋರಿಕ್ಷಾವನ್ನು ತಡೆದು ನಿಲ್ಲಿಸಿದ್ದಾರೆ.

‘ನೀವು ಎಲ್ಲಿಗೆ ಹೋಗುತ್ತಿದ್ದೀರಿ?, ನಿಮ್ಮ ಹೆಸರೇನು’ ಎಂದು ಪ್ರಶ್ನಿಸಿದ್ದು, ನಜೀರ್ ತಮ್ಮ ಹೆಸರು ಹೇಳಿದ್ದಾರೆ. ಆರೋಪಿಗಳು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಬೆತ್ತದಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿರುವುದಾಗಿ ನಜೀರ್‌ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಚಂದ್ರ, ರಂಜಿತ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT