ಮಂಗಳೂರು: ತನ್ನ ಗೆಳೆಯರೊಂದಿಗೆ ಯುವತಿಯೊಬ್ಬಳು ಹೋಟೆಲ್ ನಲ್ಲಿ ಕುಳಿತಿದ್ದಾಗ ಆಕೆಯ ಹಳೆ ಪರಿಚಯದ ಸ್ನೇಹಿತ ಮತ್ತು ಆತನ ಗೆಳೆಯರು ಏಕಾಏಕಿ ದಾಳಿ ಮಾಡಿದ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ.
ಜ.30ರಂದು ಮಧ್ಯಾಹ್ನ ಕದ್ರಿಯ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ವಿಡಿಯೊ ವೈರಲ್ ಆಗಿದೆ.
ಯುವತಿಯು ತನ್ನ ಮೂವರು ಗೆಳೆಯರೊಂದಿಗೆ ಕುಳಿತಿದ್ದಾಗ ಏಕಾಏಕಿ ನುಗ್ಗಿದ ನಾಲ್ವರು ಯುವಕರು ದಾಳಿ ನಡೆಸಿದ್ದಾರೆ. ಹೋಟೆಲ್ ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದು, ಈ ವೇಳೆ ಒಬ್ಬ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ.
ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆ ನಡೆಸಲಾಗುತ್ತಿದ್ದು, ಶೀಘ್ರದಲ್ಲಿಯೇ ಮಾಹಿತಿ ನೀಡಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.