ಈ ಕುರಿತು ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಲೋಕಯ್ಯ ಗೌಡ, ‘ಪ್ರಮುಖ ಕೃಷಿಕ ವರ್ಗವಾಗಿರುವ ಒಕ್ಕಲಿಗ ಗೌಡರು ಜಿಲ್ಲೆಯಲ್ಲಿ ಬಹು ಸಂಖ್ಯಾತರಾಗಿದ್ದಾರೆ. ಪುತ್ತೂರು ತಾಲ್ಲೂಕಿನ ಒಟ್ಟು ಜನಸಂಖ್ಯೆಯಲ್ಲಿ ಶೇ 50ರಷ್ಟು, ಸುಳ್ಯ ತಾಲ್ಲೂಕಿನಲ್ಲಿ ಶೇ 65ರಷ್ಟು ಹಾಗೂ ಬೆಳ್ತಂಗಡಿ ತಾಲ್ಲೂಕಿನಲ್ಲಿ ಶೇ 45ರಷ್ಟು ಮತದಾರರು ಗೌಡ ಜನಾಂಗದವರು. ಮಂಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 3.5 ಲಕ್ಷದಷ್ಟು ಮತದಾರರು ನಮ್ಮ ಸಮುದಾಯವರು. ಮತದಾರರು ಅಭ್ಯರ್ಥಿಗಳ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸುವ ಸಾಮರ್ಥ್ಯ ಹೊಂದಿರುವ ಸಂಖ್ಯಾಬಲವನ್ನು ಪರಿಗಣಿಸದೆ ನಮ್ಮ ಸಮಾಜವನ್ನು ರಾಜಕೀಯವಾಗಿ ಕಡೆಗಣಿಸಲಾಗಿದೆ’ ಎಂದು ಅಸಮಾಧಾನ ತೋಡಿಕೊಂಡರು.