ಮಂಗಳೂರು: ಆತ್ಮನಿರ್ಭರ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ₹4,750 ಕೋಟಿ ನೀಡುವುದಾಗಿ ಘೋಷಿಸಿದ್ದು, ಇದರಡಿ ಸಹಕಾರ ಇಲಾಖೆಗೆ ₹600 ಕೋಟಿ ಅನುದಾನ ನೀಡಲು ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ನಗರದಲ್ಲಿ ಭಾನುವಾರ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ನಬಾರ್ಡ್ ಮೂಲಕ ಸಹಕಾರ ಇಲಾಖೆಗೆ ₹1,750 ಕೋಟಿ ಅನುದಾನ ಒದಗಿಸಿದೆ ಎಂದರು.
ಈಗಾಗಲೇ 20 ಡಿಸಿಸಿ ಬ್ಯಾಂಕ್ಗಳು ಸೇರಿದಂತೆ ಸಹಕಾರ ಸಂಸ್ಥೆಗಳ ಮೂಲಕ ಶೂನ್ಯ ಹಾಗೂ ₹3 ರ ಬಡ್ಡಿದರದಲ್ಲಿ ₹10 ಸಾವಿರ ಕೋಟಿ ಕೃಷಿ ಸಾಲ ವಿತರಿಸಲಾಗಿದೆ ಎಂದು ಅವರು ತಿಳಿಸಿದರು.
‘ವಂಚನೆ ಮಾಡಿದ ಬ್ಯಾಂಕ್ ಹಾಗೂ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಡಿಸಿಸಿ ಬ್ಯಾಂಕ್ಗಳಿಗೆ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ನೇಮಿಸಿ, ಪ್ರತಿ ಜಿಲ್ಲೆಗಳಲ್ಲಿನ ಪ್ರಗತಿಯ ಪರಿಶೀಲನೆ ನಡೆಸಲಾಗುವುದು’ ಎಂದರು.