ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮನಿರ್ಭರ: ₹600 ಕೋಟಿ ಪ್ರಸ್ತಾವ- ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್

Last Updated 15 ನವೆಂಬರ್ 2020, 20:29 IST
ಅಕ್ಷರ ಗಾತ್ರ

ಮಂಗಳೂರು: ಆತ್ಮನಿರ್ಭರ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ₹4,750 ಕೋಟಿ ನೀಡುವುದಾಗಿ ಘೋಷಿಸಿದ್ದು, ಇದರಡಿ ಸಹಕಾರ ಇಲಾಖೆಗೆ ₹600 ಕೋಟಿ ಅನುದಾನ ನೀಡಲು ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿದರು.

ನಗರದಲ್ಲಿ ಭಾನುವಾರ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ನಬಾರ್ಡ್‌ ಮೂಲಕ ಸಹಕಾರ ಇಲಾಖೆಗೆ ₹1,750 ಕೋಟಿ ಅನುದಾನ ಒದಗಿಸಿದೆ ಎಂದರು.

ಈಗಾಗಲೇ 20 ಡಿಸಿಸಿ ಬ್ಯಾಂಕ್‌ಗಳು ಸೇರಿದಂತೆ ಸಹಕಾರ ಸಂಸ್ಥೆಗಳ ಮೂಲಕ ಶೂನ್ಯ ಹಾಗೂ ₹3 ರ ಬಡ್ಡಿದರದಲ್ಲಿ ₹10 ಸಾವಿರ ಕೋಟಿ ಕೃಷಿ ಸಾಲ ವಿತರಿಸಲಾಗಿದೆ ಎಂದು ಅವರು ತಿಳಿಸಿದರು.

‘ವಂಚನೆ ಮಾಡಿದ ಬ್ಯಾಂಕ್ ಹಾಗೂ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಡಿಸಿಸಿ ಬ್ಯಾಂಕ್‌ಗಳಿಗೆ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ನೇಮಿಸಿ, ಪ್ರತಿ ಜಿಲ್ಲೆಗಳಲ್ಲಿನ ಪ್ರಗತಿಯ ಪರಿಶೀಲನೆ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT