‘ಡಿ.9ರಂದು ಮರಗಳನ್ನು ಕಡಿದು ಹೊರಗಡೆ ದಾಸ್ತಾನು ಮಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮರಗಳನ್ನು ಅವುಗಳನ್ನು ವಶಪಡಿಸಿಕೊಂಡಿದ್ದರು. ಮರುದಿನ ಯಾವುದೇ ನೋಟಿಸ್ ನೀಡದೆ ತಮ್ಮ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿದ ಅಧಿಕಾರಿಗಳು ತಾಯಿ ಹಾಗೂ ನನ್ನನ್ನು ವಿಚಾರಿಸಿ ಪ್ರಕರಣಗಳನ್ನು ದಾಖಲಿಸುವುದಾಗಿ ತಿಳಿಸಿದ್ದಲ್ಲದೆ, ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಅಷ್ಟು ದೊಡ್ಡ ಮೊತ್ತ ನೀಡಲು ನನ್ನಿಂದ ಸಾಧ್ಯವಿಲ್ಲ ಎಂದು ತಿಳಿಸಿದಾಗ, ಜಾತಿ ನಿಂದನೆ ಮಾಡಿ ಮರಗಳನ್ನು ಡಿಪೊಗೆ ಸಾಗಿಸಿದ್ದಾರೆ ಎಂದು ಐತ ಅವರು ಧರ್ಮಸ್ಥಳ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಇದೀಗ ಹಿರಿಯ ಅರಣ್ಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.