ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನು ಮಾರಾಟಗಾರನ ಮೇಲೆ‌ ತಲವಾರಿನಿಂದ ದಾಳಿ: ₹2 ಲಕ್ಷ ದರೋಡೆ

Last Updated 5 ಮಾರ್ಚ್ 2022, 6:52 IST
ಅಕ್ಷರ ಗಾತ್ರ

ಉಳ್ಳಾಲ: ಕಲ್ಲಾಪು ಬಳಿ ಮೀನು ಮಾರಾಟ ನಡೆಸುತ್ತಿರುವ ವ್ಯಾಪಾರಿಯನ್ನು ತಡೆದ ಮೂವರು ಮುಸುಕುಧಾರಿ ತಂಡ ತಲವಾರಿನಿಂದ ಹಲ್ಲೆ ಮಾಡಿದ್ದು, ಟೆಂಪೋದಲ್ಲಿದ್ದ ₹2 ಲಕ್ಷ ದರೋಡೆ ಮಾಡಿದೆ.

ನಗರದ ನೇತ್ರಾವತಿ ಸೇತುವೆ ಸಮೀಪ ಶನಿವಾರ ನಸುಕಿನ ಜಾವ ಈ ಘಟನೆ ನಡೆದಿದೆ. ಉಳ್ಳಾಲ ಮುಕ್ಕಚ್ಚೇರಿ ಹೈದರಾಲಿ ರಸ್ತೆ ನಿವಾಸಿ ಮುಸ್ತಾಫ ದರೋಡೆಗೆ ಒಳಗಾದವರು.

ಕಲ್ಲಾಪು ಸಮೀಪ ಮೀನು ಮಾರಾಟ ಮಾಡುತ್ತಿರುವ ಇವರು ಎಂದಿನಂತೆ ಮನೆಯಿಂದ ಧಕ್ಕೆಗೆ ಟೆಂಪೋ ಮೂಲಕ ಮೀನು ಖರೀದಿಸಲು ತೆರಳುತ್ತಿದ್ದರು. ಈ ವೇಳೆ ತೊಕ್ಕೊಟ್ಟು ಕಡೆಯಿಂದ ಕಾರಿನಲ್ಲಿ ತಂಡವೊಂದು ಟೆಂಪೋವನ್ನು ಹಿಂಬಾಲಿಸಿದೆ‌. ನೇತ್ರಾವತಿ ಸೇತುವೆ ಸಮೀಪ ಅಡ್ಡಗಟ್ಟಿದೆ. ಬಳಿಕ ನಿರಂತರ ಹಾರನ್ ಹಾಕುವುದನ್ನು ಪ್ರಶ್ನಿಸಲು ಮುಸ್ತಾಫ ಅವರು ಕೆಳಗಿಳಿಯುತ್ತಿದ್ದಂತೆ ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಮುಸುಕುಧಾರಿಗಳು ತಲವಾರಿನಿಂದ ದಾಳಿ ನಡೆಸಿದ್ದಾರೆ.

ಟೆಂಪೋ ಡ್ಯಾಷ್ ಬೋರ್ಡಿನಲ್ಲಿರಿಸಿದ್ದ ₹2 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಗಾಯಾಳು ಮುಸ್ತಾಫ ಅವರನ್ನು ರಸ್ತೆ ಮೂಲಕ ತೆರಳುತ್ತಿದ್ದ ವ್ಯಕ್ತಿಯೊಬ್ಬರು ತೊಕ್ಕೊಟ್ಟು ನೇತಾಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಸಿಪಿ ದಿನಕರ್ ಶೆಟ್ಟಿ ನೇತೃತ್ಬದ ಪೊಲೀಸ್ ತಂಡ ತನಿಖೆ ಆರಂಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT