ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲ್ಕಿ | ಅಕ್ರಮ ಮರಳು ಅಡ್ಡೆಗೆ ದಾಳಿ: ದೋಣಿಗಳ ವಶ

Published 12 ಜನವರಿ 2024, 15:26 IST
Last Updated 12 ಜನವರಿ 2024, 15:26 IST
ಅಕ್ಷರ ಗಾತ್ರ

ಮೂಲ್ಕಿ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಕೊಪ್ಪಲ ಪ್ರದೇಶದ ನಂದಿನಿ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಮತ್ತು ಮೂಲ್ಕಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಮರಳು ತೆಗೆಯುತ್ತಿದ್ದ ನಾಲ್ಕು ದೋಣಿಗಳನ್ನು ನದಿಯಲ್ಲಿ ಮುಳುಗಿಸಿದ್ದು, ಅದನ್ನು ಕ್ರೇನ್ ಬಳಸಿ ಮೇಲೆತ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಅಕ್ರಮ ಮರಳುಗಾರಿಗೆ ತಡೆಯುವಂತೆ ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT