ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ದಿನೇಶ್, ಫರಂಗಿಪೇಟೆಯಲ್ಲಿರಾಷ್ಟ್ರೀಯ ಹೆದ್ದಾರಿ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸ್ಟುಡಿಯೊ ಹೊಂದಿದ್ದಾರೆ. ಅಲ್ಲಿಗೆ ರಾತ್ರಿ 8 ಗಂಟೆ ಸುಮಾರಿಗೆ ನುಗ್ಗಿದ ದುಷ್ಕರ್ಮಿಗಳ ತಂಡವು ದಾಳಿ ನಡೆಸಿ ಪರಾರಿಯಾಗಿದೆ. ಅವರ ತಲೆ, ಹೊಟ್ಟೆ ಮತ್ತಿತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ನಿಖರ ಕಾರಣವು ತಿಳಿದು ಬಂದಿಲ್ಲ.