<p><strong>ಸುಳ್ಯ:</strong> ಇಲ್ಲಿ ಆಧಾರ್ ಕೇಂದ್ರ ಸ್ಥಾಪನೆಗೆ ಜಿಲ್ಲಾಧಿಕಾರಿ ಜೊತೆ ಚರ್ಚೆ ಮಾಡಲಾಗುವುದು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.</p>.<p>ಸೋಮವಾರ ಇಲ್ಲಿ ನಡೆದ ಯುವ ವಿಕಾಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬೆಳೆವಿಮೆ ಪ್ರತಿ ಸಲ ಜೂನ್ ತಿಂಗಳಲ್ಲಿ ಸಿಗುತ್ತಿತ್ತು. ಈ ಬಾರಿ ಇನ್ನೂ ಆಗಲಿಲ್ಲ. ಮಳೆ ವಿಪರೀತವಾಗಿ ಬೆಳೆ ನಷ್ಟವಾಗಿದೆ. ಆದ್ದರಿಂದ ಆದಷ್ಟು ಶೀಘ್ರ ವಿಮೆಗೆ ಅವಕಾಶ ನೀಡಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಕೋರಿದರು.</p>.<p>ಸುಳ್ಯ ಭಾಗದ ಹಲವು ಭಾಗದಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಆದ್ದರಿಂದ ಸೋಲಾರ್ ಬೇಲಿ ಸ್ಥಾಪನೆಗೆ ವ್ಯವಸ್ಥೆ ಮಾಡಬೇಕು. ಪ್ರಕೃತಿ ವಿಕೋಪದ ಪರಿಹಾರದಡಿ ಸುಳ್ಯಕ್ಕೆ ಹೆಚ್ಚು ಅನುದಾನ ಬರುವಂತೆ ಮಾಡಬೇಕು ಎಂದು ಶಾಸಕರು ಕೇಳಿಕೊಂಡರು.</p>.<p>ಆಧಾರ್ ಕೇಂದ್ರ ಅವಶ್ಯಕತೆ ಕುರಿತು ಹಲವರು ಪ್ರಸ್ತಾಪಿಸಿದರು. ಸುಳ್ಯಕ್ಕೆ ಆಧಾರ್ ಕೇಂದ್ರದ ಆರಂಭಕ್ಕೆ ಜಿಲ್ಲಾಧಿಕಾರಿ ಬಳಿ ಮಾತನಾಡುವೆ ಎಂದು ಸಂಸದ ಬ್ರಿಜೇಶ್ ಚೌಟ ಭರವಸೆ ನೀಡಿದರು.</p>.<p>ಜಾಗದ ವಿಚಾರಕ್ಕೆ ಸಂಬಂಧ ಮನವಿಯೊಂದು ಬಂದಾಗ ಸಂಸದರು ತಹಶೀಲ್ದಾರ್ ಎಲ್ಲಿ ಎಂದು ಕೇಳಿದರು. ಈ ವೇಳೆ ಸ್ಥಳಕ್ಕೆ ಬಂದ ತಹಶೀಲ್ದಾರ್ ಮಂಜುಳಾ ಅವರಿಗೆ ಸಂಸದರು ಬರುವಾಗ ಇಲ್ಲಿ ಇರಬೇಕು ಎಂದು ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು. ನನಗೆ ಮಾಹಿತಿ ಇರಲಿಲ್ಲ ಎಂದು ತಹಶೀಲ್ದಾರ್ ಹೇಳಿದಾಗ ತಹಶೀಲ್ದಾರ್ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಳ್ಯ:</strong> ಇಲ್ಲಿ ಆಧಾರ್ ಕೇಂದ್ರ ಸ್ಥಾಪನೆಗೆ ಜಿಲ್ಲಾಧಿಕಾರಿ ಜೊತೆ ಚರ್ಚೆ ಮಾಡಲಾಗುವುದು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.</p>.<p>ಸೋಮವಾರ ಇಲ್ಲಿ ನಡೆದ ಯುವ ವಿಕಾಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬೆಳೆವಿಮೆ ಪ್ರತಿ ಸಲ ಜೂನ್ ತಿಂಗಳಲ್ಲಿ ಸಿಗುತ್ತಿತ್ತು. ಈ ಬಾರಿ ಇನ್ನೂ ಆಗಲಿಲ್ಲ. ಮಳೆ ವಿಪರೀತವಾಗಿ ಬೆಳೆ ನಷ್ಟವಾಗಿದೆ. ಆದ್ದರಿಂದ ಆದಷ್ಟು ಶೀಘ್ರ ವಿಮೆಗೆ ಅವಕಾಶ ನೀಡಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಕೋರಿದರು.</p>.<p>ಸುಳ್ಯ ಭಾಗದ ಹಲವು ಭಾಗದಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಆದ್ದರಿಂದ ಸೋಲಾರ್ ಬೇಲಿ ಸ್ಥಾಪನೆಗೆ ವ್ಯವಸ್ಥೆ ಮಾಡಬೇಕು. ಪ್ರಕೃತಿ ವಿಕೋಪದ ಪರಿಹಾರದಡಿ ಸುಳ್ಯಕ್ಕೆ ಹೆಚ್ಚು ಅನುದಾನ ಬರುವಂತೆ ಮಾಡಬೇಕು ಎಂದು ಶಾಸಕರು ಕೇಳಿಕೊಂಡರು.</p>.<p>ಆಧಾರ್ ಕೇಂದ್ರ ಅವಶ್ಯಕತೆ ಕುರಿತು ಹಲವರು ಪ್ರಸ್ತಾಪಿಸಿದರು. ಸುಳ್ಯಕ್ಕೆ ಆಧಾರ್ ಕೇಂದ್ರದ ಆರಂಭಕ್ಕೆ ಜಿಲ್ಲಾಧಿಕಾರಿ ಬಳಿ ಮಾತನಾಡುವೆ ಎಂದು ಸಂಸದ ಬ್ರಿಜೇಶ್ ಚೌಟ ಭರವಸೆ ನೀಡಿದರು.</p>.<p>ಜಾಗದ ವಿಚಾರಕ್ಕೆ ಸಂಬಂಧ ಮನವಿಯೊಂದು ಬಂದಾಗ ಸಂಸದರು ತಹಶೀಲ್ದಾರ್ ಎಲ್ಲಿ ಎಂದು ಕೇಳಿದರು. ಈ ವೇಳೆ ಸ್ಥಳಕ್ಕೆ ಬಂದ ತಹಶೀಲ್ದಾರ್ ಮಂಜುಳಾ ಅವರಿಗೆ ಸಂಸದರು ಬರುವಾಗ ಇಲ್ಲಿ ಇರಬೇಕು ಎಂದು ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು. ನನಗೆ ಮಾಹಿತಿ ಇರಲಿಲ್ಲ ಎಂದು ತಹಶೀಲ್ದಾರ್ ಹೇಳಿದಾಗ ತಹಶೀಲ್ದಾರ್ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>