ರಾಜೇಶ್ ಪವರ್ ಪ್ರೆಸ್ನ ಮಾಲೀಕ ಎಂಎಸ್.ರಘುನಾಥ್ ರಾವ್ ಅಧ್ಯಕ್ಷತೆ ವಹಿಸುವರು. ವಕೀಲ ಕೆ.ಆರ್.ಆಚಾರ್ಯ ಬೋಳಂತಕೋಡಿ ಸ್ಮೃತಿ ನಮನ ಮಾಡುವರು. ಪ್ರಶಸ್ತಿ ಪುರಸ್ಕೃತರ ಕುರಿತು ಸುಮಂಗಲಾ ರತ್ನಾಕರ್ ಅಭಿನಂದನಾ ಮಾತುಗಳನ್ನಾಡುವರು. ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ಮುಖ್ಯ ಅತಿಥಿಗಳಾಗಿವರು. `ಧೀಶಕ್ತಿ' ಮಹಿಳಾ ಯಕ್ಷಬಳಗದಿಂದ ತಾಳಮದ್ದಳೆ ನಡೆಯುವುದು.