ಮಂಗಳೂರು: ಅದಾನಿ ಫೌಂಡೇಷನ್ನ ಸುಪೋಶನ್ ಯೋಜನೆ ಅಡಿಯಲ್ಲಿ ಮುಟ್ಟಿನ ನೈರ್ಮಲ್ಯ ದಿನದ ಅಂಗವಾಗಿ ಮಹಿಳೆಯರು ಋತುಸ್ರಾವದ ಸಂದರ್ಭದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಬೈಕಂಪಾಡಿ ಮೀನಕಳಿಯ ಪರಿಸರದಲ್ಲಿ ಮಾಹಿತಿ ನೀಡಲಾಯಿತು.
ಸುಪೋಶನ್ ಅಧಿಕಾರಿ ಪ್ರೇಮಾ ಡಿಸೋಜ ಮಾತನಾಡಿ, ಋತುಚಕ್ರದ ವೇಳೆ ಆರೋಗ್ಯ ಮತ್ತು ನೈರ್ಮಲ್ಯ ಕಾಳಜಿ ಅಗತ್ಯ. ಸಕಾಲದಲ್ಲಿ ಸ್ಯಾನಿಟರಿ ಪ್ಯಾಡ್ಗಳ ಬದಲಾವಣೆ, ಅವುಗಳ ಬಳಕೆ ಬಗ್ಗೆ ಅರಿವು ಇರಬೇಕು ಎಂದರು.