ಬೆಳ್ತಂಗಡಿ: ತಾಲ್ಲೂಕಿನ ಕನ್ಯಾಡಿ ಶ್ರೀರಾಮ ಕ್ಷೇತ್ರ, ಉಜಿರೆ ಜನಾರ್ದನ ದೇವಸ್ಥಾನ, ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನ, ನಿಡಿಗಲ್ ಲೋಕನಾಥೇಶ್ವರ ದೇವಸ್ಥಾನ, ನಾವೂರು ಗೋಪಾಲಕೃಷ್ಣ ದೇವಸ್ಥಾನ, ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ, ಬೆಳಾಲು ಮಾಯಾಮಹದೇವ ದೇವಸ್ಥಾನ, ಉಜಿರೆ ಹಳೆಪೇಟೆ ಶ್ರೀರಾಮ ಮಂದಿರದಲ್ಲಿ ಸೇರಿದಂತೆ ತಾಲ್ಲೂಕಿನ ದೇಗುಲಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಭಜನೆ, ಧಾರ್ಮಿಕ ಉಪನ್ಯಾಸ, ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.