ಪುತ್ತೂರು: ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಒಂದೆಡೆ ಲಸಿಕೆ ನೀಡಲಾಗುತ್ತಿದ್ದು, ಇದರ ಜತೆಗೆ ಇನ್ನೂ ಹಲವು ರೀತಿಯ ಔಷಧಿಗಳ ಮೂಲಕ ಸೋಂಕು ನಿಯಂತ್ರಿಸುವ ಕೆಲಸಗಳಾಗುತ್ತಿದೆ. ಈ ನಡುವೆ ಆಯುಷ್ ಮಂತ್ರಾಲಯ ‘ಆಯುಷ್-64’ ಎನ್ನುವ ಗುಳಿಗೆ (ಮಾತ್ರೆ) ಯನ್ನು ಕೋವಿಡ್ ಸೋಂಕಿತರಿಗೆ ನೀಡಲು ತೀರ್ಮಾನಿಸಿದೆ. ಈಗಾಗಲೇ ಮಾರುಕಟ್ಟೆಗೆ ಪ್ರವೇಶಿಸಿರುವ ಈ ಗುಳಿಗೆಗಳನ್ನು ಪುತ್ತೂರಿನಲ್ಲಿ ತಯಾರಿಸಲಾಗುತ್ತಿದೆ.