<p><strong>ಮಂಗಳೂರು:</strong> ‘ನನ್ನ ಕಂಪನಿಗಳ ಬಗ್ಗೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಸಹಕರಿಸಲು ಶುಕ್ರವಾರ ಯುಎಇಗೆ ಮರಳುತ್ತೇನೆ’ ಎಂದು ಎನ್ಎಂಸಿ ಹೆಲ್ತ್ ಮತ್ತು ಫಿನಬ್ಲರ್ ಕಂಪನಿಗಳ ಮಾಲೀಕ ಬಿ.ಆರ್. ಶೆಟ್ಟಿ ಹೇಳಿದ್ದಾರೆ.</p>.<p>‘ಯುಎಇಯ ನ್ಯಾಯ ವ್ಯವಸ್ಥೆಯ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ ಹಾಗೂ ವಂಚನೆ ಮಾಡಿದವರು ಕಾನೂನು ಕ್ರಮಕ್ಕೆ ಗುರಿಯಾಗುವುದನ್ನು ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.</p>.<p>‘ಕಂಪನಿಗಳು, ಅವುಗಳ ಉದ್ಯೋಗಿಗಳು, ಷೇರುದಾರರು ಮತ್ತು ಕಂಪನಿಗಳೊಂದಿಗೆ ಸಂಬಂಧ ಹೊಂದಿರುವ ಇತರರಿಗೆ ಆಗಿರಬಹುದಾದ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ಪ್ರಾಧಿಕಾರಗಳಿಗೆ ಸಹಕಾರ ನೀಡಲು ನಾನು ಯುಎಇಗೆ ಮರಳುತ್ತಿದ್ದೇನೆ’ ಎಂದು ಶೆಟ್ಟಿ ಹೇಳಿದ್ದಾರೆ.</p>.<p>ಬೆಂಗಳೂರಿನಿಂದ ಯುಎಇಗೆ ತೆರಳುತ್ತಿರುವ ಸಂದರ್ಭದಲ್ಲಿ ಬಿ.ಆರ್. ಶೆಟ್ಟಿ ಅವರಿಗೆ ಪ್ರಯಾಣಿಸಲು ಅವಕಾಶ ನೀಡಲಿಲ್ಲ ಎಂಬ ವರದಿಯನ್ನು ಅಲ್ಲಗಳೆದಿರುವ ಅವರು, ‘ನನ್ನ ಪತ್ನಿ ಯುಎಇಗೆ ತೆರಳುತ್ತಿದ್ದು, ಅವಳನ್ನು ಬಿಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದೆ’ ಎಂದಿದ್ದಾರೆ.</p>.<p>‘ಫೆಬ್ರುವರಿಯಲ್ಲಿ ಭಾರತಕ್ಕೆ ಬಂದಿದ್ದೆ. ನನ್ನ ಸಹೋದರನ ನಿಧನದಿಂದಾಗಿ ಮತ್ತಷ್ಟು ಕಾಲ ಇಲ್ಲಿಯೇ ಉಳಿಯುವಂತಾಯಿತು. ನಂತರ ಕೋವಿಡ್–19 ನಿಂದಾಗಿ ಯುಎಇಗೆ ಪ್ರಯಾಣಿಸಲು ಸಾಧ್ಯವಾಗಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ನನ್ನ ಕಂಪನಿಗಳ ಬಗ್ಗೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಸಹಕರಿಸಲು ಶುಕ್ರವಾರ ಯುಎಇಗೆ ಮರಳುತ್ತೇನೆ’ ಎಂದು ಎನ್ಎಂಸಿ ಹೆಲ್ತ್ ಮತ್ತು ಫಿನಬ್ಲರ್ ಕಂಪನಿಗಳ ಮಾಲೀಕ ಬಿ.ಆರ್. ಶೆಟ್ಟಿ ಹೇಳಿದ್ದಾರೆ.</p>.<p>‘ಯುಎಇಯ ನ್ಯಾಯ ವ್ಯವಸ್ಥೆಯ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ ಹಾಗೂ ವಂಚನೆ ಮಾಡಿದವರು ಕಾನೂನು ಕ್ರಮಕ್ಕೆ ಗುರಿಯಾಗುವುದನ್ನು ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.</p>.<p>‘ಕಂಪನಿಗಳು, ಅವುಗಳ ಉದ್ಯೋಗಿಗಳು, ಷೇರುದಾರರು ಮತ್ತು ಕಂಪನಿಗಳೊಂದಿಗೆ ಸಂಬಂಧ ಹೊಂದಿರುವ ಇತರರಿಗೆ ಆಗಿರಬಹುದಾದ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ಪ್ರಾಧಿಕಾರಗಳಿಗೆ ಸಹಕಾರ ನೀಡಲು ನಾನು ಯುಎಇಗೆ ಮರಳುತ್ತಿದ್ದೇನೆ’ ಎಂದು ಶೆಟ್ಟಿ ಹೇಳಿದ್ದಾರೆ.</p>.<p>ಬೆಂಗಳೂರಿನಿಂದ ಯುಎಇಗೆ ತೆರಳುತ್ತಿರುವ ಸಂದರ್ಭದಲ್ಲಿ ಬಿ.ಆರ್. ಶೆಟ್ಟಿ ಅವರಿಗೆ ಪ್ರಯಾಣಿಸಲು ಅವಕಾಶ ನೀಡಲಿಲ್ಲ ಎಂಬ ವರದಿಯನ್ನು ಅಲ್ಲಗಳೆದಿರುವ ಅವರು, ‘ನನ್ನ ಪತ್ನಿ ಯುಎಇಗೆ ತೆರಳುತ್ತಿದ್ದು, ಅವಳನ್ನು ಬಿಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದೆ’ ಎಂದಿದ್ದಾರೆ.</p>.<p>‘ಫೆಬ್ರುವರಿಯಲ್ಲಿ ಭಾರತಕ್ಕೆ ಬಂದಿದ್ದೆ. ನನ್ನ ಸಹೋದರನ ನಿಧನದಿಂದಾಗಿ ಮತ್ತಷ್ಟು ಕಾಲ ಇಲ್ಲಿಯೇ ಉಳಿಯುವಂತಾಯಿತು. ನಂತರ ಕೋವಿಡ್–19 ನಿಂದಾಗಿ ಯುಎಇಗೆ ಪ್ರಯಾಣಿಸಲು ಸಾಧ್ಯವಾಗಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>