ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಗೇರ ಚಾವಡಿ: ಹೊರೆ ಕಾಣಿಕೆ ಸಮರ್ಪಣೆ

Published 2 ಮೇ 2024, 5:57 IST
Last Updated 2 ಮೇ 2024, 5:57 IST
ಅಕ್ಷರ ಗಾತ್ರ

ಬದಿಯಡ್ಕ: ಕನ್ನೆಪ್ಪಾಡಿಯ ಕೊಡ್ಯಮ್ಮೆ ಅಂತಲ ಮೊಗೇರ ಚಾವಡಿಯ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಬುಧವಾರ ಸಂಜೆ ನಡೆಯಿತು. ನೀರ್ಚಾಲು ಕುಮಾರ ಸ್ವಾಮಿ ಭಜನಾ ಮಂದಿರದ ಪರಿಸರದಿಂದ ಹೊರಟ ಮೆರವಣಿಗೆಗೆ ಅರ್ಚಕ ಸುಬ್ರಹ್ಮಣ್ಯ ಆಚಾರ್ಯ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಚಾವಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಐ.ಲಕ್ಷ್ಮಣ ಪೆರಿಯಡ್ಕ, ಹೊರೆ ಕಾಣಿಕೆ ಸಮಿತಿಯ ಬಾಲಕೃಷ್ಣ ನಾಯ್ಕ್ ನೀರ್ಚಾಲು, ಶಂಕರ ಮಾಡತ್ತಡ್ಕ, ಕವಿ ರಾಧಾಕೃಷ್ಣ ಉಳಿಯತ್ತಡ್ಕ, ರಾಮ ಪಟ್ಟಾಜೆ, ಕೃಷ್ಣ ದರ್ಬೆತ್ತಡ್ಕ, ಸುಂದರ ಬಾರಡ್ಕ, ಉದಯ ಕುಮಾರ್ ಎಂ, ಕೆ. ಕೆ. ಸ್ವಾಮಿಕೃಪಾ, ಕಿಶೋರ್ ಕುಮಾರ್, ಗಣೇಶ್ ಚೋಯಿಮೂಲೆ, ಸತೀಶ ಅಣೆಬೈಲು ಪಾಲ್ಗೊಂಡಿದ್ದರು.

ಸುಬ್ರಹ್ಮಣ್ಯ ಖಂಡಿಗೆ ಉಗ್ರಾಣ ಮುಹೂರ್ತ ನೆರವೇರಿಸಿದರು. ಸಿ.ಐ ಬಾಲಕೃಷ್ಣ ಸೂರಂಬೈಲು, ಶಂಕರ ಸ್ವಾಮಿಕೃಪಾ ಇದ್ದರು. ಈ ಸಂದರ್ಭದಲ್ಲಿ ವಿವಿಧ ಭಜನಾ ಸಂಘದ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಿತು. ಕ್ಷೇತ್ರದ ತಂತ್ರಿವರ್ಯ ಮಹೇಶ್ ಶಾಂತಿ ಹೆಜಮಾಡಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT