ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಲ್ಲಿ ಯುವಕ ಸಾವು– ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಬಜರಂಗದಳ ಪ್ರತಿಭಟನೆ

ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಘಟನೆ
Published 14 ಮೇ 2023, 19:02 IST
Last Updated 14 ಮೇ 2023, 19:02 IST
ಅಕ್ಷರ ಗಾತ್ರ

ಮಂಗಳೂರು: ಪಿತ್ತಜನಕಾಂಗದ ಸಮಸ್ಯೆಗಾಗಿ ಮೂರು ದಿನಗಳಿಂದ ನಗರದ ವೆನ್ಲಾಕ್  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಭಾನುವಾರ ಮೃತಪಟ್ಟಿದ್ದಾರೆ. ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು  ಬಜರಂಗದಳದವರು ಆರೋಪಿಸಿದ್ದಾರೆ.  ಮೃತ ಯುವಕನ‌ ಶವವನ್ನು ವೆನ್ಲಾಕ್ ಆಸ್ಪತ್ರೆ ಬಳಿ ಇಟ್ಟು ಭಾನುವಾರ ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(30) ಮೃತಪಟ್ಟ ಯುವಕ.‌  ಹೊಟ್ಟೆ ನೋವು ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಖಾಸಗಿ ಬಸ್ಸು ಚಾಲಕರಾಗಿ ದುಡಿಯುತ್ತಿದ್ದ ರೂಪೇಶ್ ಅವರು ಅವಿವಾಹಿತರಾಗಿದ್ದರು. ಬಜರಂಗ ದಳ ಸಹಿತ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT