‘ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 7ರ ತನಕ ಕಾರ್ಯಕ್ರಮ ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿದ್ದೆವು. ಕಾರ್ಯಕ್ರಮಕ್ಕೆ ತಯಾರಿ ನಡೆಸುತ್ತಿದ್ದಾರೆ ಆರೋಪಿಗಳಾದ ಬಾಲಚಂದ್ರ, ಗಣೇಶ್, ಜಯಪ್ರಶಾಂತ್, ಅಕ್ಷಯ್, ಮಿಥುನ್ ರಾಜ್ ಮತ್ತು ಚಿರಾಗ್ ದಾಳಿ ನಡೆಸಿದ್ದಾರೆ. ಆರೋಪಿಗಳಲ್ಲಿ ಒಬ್ಬನ ಕೈಯಲ್ಲಿ ಮಾರಕಾಯುಧವಿತ್ತು. ವೇದಿಕೆಗೆ ಅಕ್ರಮವಾಗಿ ಪ್ರವೇಶಿಸಿದ ಆತ ಫ್ಲೆಕ್ಸ್ಗಳನ್ನು ಹರಿದು ಹಾಕಿದ್ದ. ವೇದಿಕೆಯ ಅಲಂಕಾರಿಕ ವಸ್ತುಗಳಿಗೆ ಹಾನಿ ಮಾಡಿದ್ದ, ಎಲೆಕ್ಟ್ರಾನಿಕ್ ಉಪಕರಣಗಳನ್ನು ಎಳೆದಾಡಿದ್ದ. ಇದರಿಂದ ಅಂದಾಜು₹ 3 ಲಕ್ಷ ನಷ್ಟ ಉಂಟಾಗಿದೆ ಎಂದು ಸಂಘಟಕರು ಆರೋಪಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.