ಕಟೀಲು- ಬಜಪೆ ರಾಜ್ಯ ಹೆದ್ದಾರಿಯ ಎಕ್ಕಾರು ಶಾಲೆ ಆವರಣ ಗೋಡೆ ಬಳಿಯಲ್ಲೇ ಹೊಂಡ ಮಾಡಲಾಗಿದ್ದು, ಇದರಿಂದಾಗಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಹೊಂಡದ ಸಮೀಪವೇ ಶಾಲೆಯ ಪ್ರವೇಶ ದ್ವಾರವಿದ್ದು ಮಕ್ಕಳಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಹೊಂಡ ಮುಚ್ಚಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.