ಮಂಗಳೂರು: ಪ್ರವಾದಿ ಇಬ್ರಾಹಿಂದ ಮತ್ತು ಅವರ ಪುತ್ರ ಇಸ್ಮಾಯಿಲ್ ಅವರ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇದೇ 31ರ ಶುಕ್ರವಾರ ಕರಾವಳಿಯಲ್ಲಿ ಆಚರಿಸಲಾಗುವುದು ಎಂದು ಖಾಝಿಗಳಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಬೇಕಲ ಇಬ್ರಾಹಿಂ ಮುಸ್ಲಿಯಾರ್ ಪ್ರತ್ಯೇಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.