<p><strong>ಮಂಗಳೂರು</strong>: ಬಲ್ಲಾಳ್ಬಾಗ್ ಫ್ರೆಂಡ್ಸ್ ಸಂಘಟನೆ ಸದಸ್ಯರ ಮೇಲೆ ಬೇರೆ ಧರ್ಮದ ಯುವಕರ ತಂಡ ದಾಳಿ ಮಾಡಿ, ಹಲ್ಲೆ ನಡೆಸಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ಎಲ್ಲ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಸಂಘಟನೆಯ ಉಪಾಧ್ಯಕ್ಷ ರಕ್ಷಿತ್ ಕೊಟ್ಟಾರಿ ಒತ್ತಾಯಿಸಿದರು.</p>.<p>ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಟೋಬರ್ 30ರ ರಾತ್ರಿ ಅಳಕೆಯ ಸುಮಾರು 15 ಮಂದಿ ಯುವಕರ ತಂಡ ವಿನಾಕಾರಣ ನಮ್ಮ ಸಂಘಟನೆಯ ಸದಸ್ಯರ ಮೇಲೆ ಹಲ್ಲೆ ನಡೆಸಿದೆ. ಪೊಲೀಸರು ಪ್ರಮುಖ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ಘಟನೆಯ ಹಿಂದೆ ಯಾರಿದ್ದಾರೆ, ಯಾಕೆ ಹಲ್ಲೆ ನಡೆಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕು. ಘಟನೆ ಕುರಿತಂತೆ, ಮುಖ್ಯಮಂತ್ರಿ, ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.</p>.<p>ಘಟನೆ ನಡೆದು ವಾರ ಕಳೆದರೂ ತನಿಖೆ ಸರಿಯಾಗಿ ಆಗಿಲ್ಲ. ಪೊಲೀಸ್ ಇಲಾಖೆ ಮುತುವರ್ಜಿವಹಿಸಿ, ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಸಂಘಟನೆಯ ಪ್ರಮುಖ ಧನಂಜಯ ಕೊಟ್ಟಾರಿ ಒತ್ತಾಯಿಸಿದರು.</p>.<p>15 ವರ್ಷಗಳಿಂದ ಧಾರ್ಮಿಕ ಮತ್ತು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಬಲ್ಲಾಳ್ಬಾಗ್ ಫ್ರೆಂಡ್ಸ್ನ ಕಾರ್ಯಗಳಿಗೆ ಅಡ್ಡಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಇದರಿಂದ ಪರಿಸದಲ್ಲಿ ಅಶಾಂತಿ ತಲೆದೋರಿದೆ ಎಂದರು.</p>.<p>ಸಂಘಟನೆ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಪದಾಧಿಕಾರಿಗಳಾದ ಯಾದವ ಪೂಜಾರಿ, ಮೋಹಿತ್ ಶೆಟ್ಟಿ, ರೋಹಿತ್ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಬಲ್ಲಾಳ್ಬಾಗ್ ಫ್ರೆಂಡ್ಸ್ ಸಂಘಟನೆ ಸದಸ್ಯರ ಮೇಲೆ ಬೇರೆ ಧರ್ಮದ ಯುವಕರ ತಂಡ ದಾಳಿ ಮಾಡಿ, ಹಲ್ಲೆ ನಡೆಸಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ಎಲ್ಲ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಸಂಘಟನೆಯ ಉಪಾಧ್ಯಕ್ಷ ರಕ್ಷಿತ್ ಕೊಟ್ಟಾರಿ ಒತ್ತಾಯಿಸಿದರು.</p>.<p>ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ಟೋಬರ್ 30ರ ರಾತ್ರಿ ಅಳಕೆಯ ಸುಮಾರು 15 ಮಂದಿ ಯುವಕರ ತಂಡ ವಿನಾಕಾರಣ ನಮ್ಮ ಸಂಘಟನೆಯ ಸದಸ್ಯರ ಮೇಲೆ ಹಲ್ಲೆ ನಡೆಸಿದೆ. ಪೊಲೀಸರು ಪ್ರಮುಖ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಈ ಘಟನೆಯ ಹಿಂದೆ ಯಾರಿದ್ದಾರೆ, ಯಾಕೆ ಹಲ್ಲೆ ನಡೆಸಲಾಗಿದೆ ಎಂಬುದನ್ನು ಬಹಿರಂಗಪಡಿಸಬೇಕು. ಘಟನೆ ಕುರಿತಂತೆ, ಮುಖ್ಯಮಂತ್ರಿ, ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.</p>.<p>ಘಟನೆ ನಡೆದು ವಾರ ಕಳೆದರೂ ತನಿಖೆ ಸರಿಯಾಗಿ ಆಗಿಲ್ಲ. ಪೊಲೀಸ್ ಇಲಾಖೆ ಮುತುವರ್ಜಿವಹಿಸಿ, ಸತ್ಯವನ್ನು ಬಹಿರಂಗಪಡಿಸಬೇಕು ಎಂದು ಸಂಘಟನೆಯ ಪ್ರಮುಖ ಧನಂಜಯ ಕೊಟ್ಟಾರಿ ಒತ್ತಾಯಿಸಿದರು.</p>.<p>15 ವರ್ಷಗಳಿಂದ ಧಾರ್ಮಿಕ ಮತ್ತು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಬಲ್ಲಾಳ್ಬಾಗ್ ಫ್ರೆಂಡ್ಸ್ನ ಕಾರ್ಯಗಳಿಗೆ ಅಡ್ಡಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಇದರಿಂದ ಪರಿಸದಲ್ಲಿ ಅಶಾಂತಿ ತಲೆದೋರಿದೆ ಎಂದರು.</p>.<p>ಸಂಘಟನೆ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಪದಾಧಿಕಾರಿಗಳಾದ ಯಾದವ ಪೂಜಾರಿ, ಮೋಹಿತ್ ಶೆಟ್ಟಿ, ರೋಹಿತ್ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>