ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಪ ರಕ್ಷಿತಾರಣ್ಯದಲ್ಲಿ ಬೆಂಕಿ ಅವಘಡ

Last Updated 30 ಮಾರ್ಚ್ 2023, 5:37 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಬಳ್ಪ ರಕ್ಷಿತಾರಣ್ಯದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅರಣ್ಯ ಇಲಾಖೆಯವರು, ಊರವರು, ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಅದನ್ನು ನಂದಿಸಲು ಹರಸಾಹಸ ಪಟ್ಟರು.

ನಾಲ್ಕೂರು ಮತ್ತು ಯೇನೆಕಲ್ಲು ಗ್ರಾಮಗಳನ್ನು ಹೊಂದಿಕೊಂಡಿರುವ ಅರಣ್ಯ ಪ್ರದೇಶ ತುಂಬತ್ತಾಜೆ, ವಲ್ಪಾರೆ, ಚಾರ್ಮತ ಅರಣ್ಯ ಪ್ರದೇಶದ ಹೊಡ್ಡೆತಮುಖ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಊರಿನವರು, ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಸೇರಿಕೊಂಡು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಮಂಗಳವಾರ ಸಂಜೆ ಒಮ್ಮೆ ನಂದಿಸಲಾಗಿತ್ತು. ಬುಧವಾರ ಮತ್ತೆ ಬೆಂಕಿ ಹೊತ್ತಿಕೊಂಡಿದೆ ಎಂದು ಸ್ಥಳೀಯರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT