ಪ್ರವೀಣ್ ನೆಟ್ಟಾರು ಅವರ ಮನೆಗೆ ಶುಕ್ರವಾರ ಭೇಟಿ ನೀಡಿದ ಅವರು ಬಂಧುಗಳಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳ ಬರುವ ಮುತಾಲಿಕ್ ಅವರಿಗೆ ನಿಷೇಧ ಹೇರುವುದು ಖಂಡನೀಯ. ಪ್ರವೀಣ್ ಹತ್ಯೆಗೆ ಬಿಜೆಪಿ ಸರ್ಕಾರವೇ ಕಾರಣ. ಇದರ ರಾಜಕೀಯ ಲಾಭ ಪಡೆಯಲು ಬಿಜೆಪಿ ಹವಣಿಸುತ್ತಿದೆ' ಎಂದು ಟೀಕಿಸಿದರು.