ಬೆಳ್ತಂಗಡಿ: ‘ಕ್ರೀಡೆಯನ್ನು ಪ್ರೋತ್ಸಾಹಿಸುವ ಮನಸ್ಸನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು' ಎಂದು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಬೆಳ್ತಂಗಡಿ ತಾಲ್ಲೂಕು ಅಧ್ಯಕ್ಷ ರಂಜನ್ ಜಿ. ಗೌಡ ಹೇಳಿದರು.
ಗುರುದೇವ ಎಜುಕೇಷನಲ್ ಟ್ರಸ್ಟ್ ಸದಸ್ಯ ಕೆ. ಜಿ.ಬಂಗೇರ ಅವರ 101 ನೇ ಜನ್ಮದಿನದ ಪ್ರಯುಕ್ತ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಬಾಲಕರ ಆಹ್ವಾನಿತ ತಂಡಗಳ ವಾಲಿಬಾಲ್ ಟೂರ್ನಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ.ವಸಂತ ಬಂಗೇರ , ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಪೀತಾಂಬರ ಹೇರಾಜೆ ಮಾತನಾಡಿದರು.
ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ರಾಧಾಕೃಷ್ಣ ಟಿ, ಅಮಿತಾನಂದ ಹೆಗ್ಡೆ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ರಾಮಚಂದ್ರ ದೊಡ್ಡಮಣಿ, ಗುಣ ಪ್ರಸಾದ್ ಕಾರಂದೂರು, ಯಶೋಧರ ಸುವರ್ಣ ಅವರನ್ನು ಸನ್ಮಾನಿಸಲಾಯಿತು.
ಪ್ರಾಂಶುಪಾಲರಾದ ಡಾ. ಸವಿತಾ, ಉಪ ಪ್ರಾಂಶುಪಾಲ ಶಮೀವುಲ್ಲಾ, ಉಪನ್ಯಾಸಕರಾದ ಗಣೇಶ್ ಶಿರ್ಲಾಲು, ಮಲ್ಲಿಕಾ, ಮಾಯಾ ಭಟ್, ಸವಿತಾ, ಸುಷ್ಮಾ, ಹರೀಶ್ ಪೂಜಾರಿ, ದೀಪಾ ಎಸ್. ಸುವರ್ಣ ಪಾಲ್ಗೊಂಡರು.