ಮಂಗಳೂರು: ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಯೋಜನೆಯಡಿ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ನಗರದ ರೆಡ್ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಭವನ ನಿರ್ಮಾಣ ಕಾಮಗಾರಿಗೆ ₹ 10 ಲಕ್ಷ ಚೆಕ್ ಅನ್ನು ಮಂಗಳವಾರ, ಬ್ಯಾಂಕ್ ಸಿಇಒ ಅಟನ್ ಕುಮಾರ್ ದಾಸ್ ಅವರು ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರಿಗೆ ಹಸ್ತಾಂತರಿಸಿದರು.