ವಿಟ್ಲ (ದಕ್ಷಿಣ ಕನ್ನಡ): ಇಲ್ಲಿಗೆ ಸಮೀಪದ ಅಡ್ಯನಡ್ಕದಲ್ಲಿ ಕರ್ನಾಟಕ ಬ್ಯಾಂಕ್ ಶಾಖಾ ಕಚೇರಿಯಿಂದ ಬುಧವಾರ ರಾತ್ರಿ ಭಾರಿ ಪ್ರಮಾಣದ ನಗ ನಗದು ಕಳವಾಗಿದೆ.
ಕಿಟಕಿಯ ಸರಳುಗಳನ್ನು ಕತ್ತರಿಸಿ ಕಟ್ಟಡದೊಳಗೆ ನುಗ್ಗಿದ ಕಳ್ಳರು ಹಣ-ಒಡವೆ ಕದ್ದೊಯ್ದಿದ್ದಾರೆ. ಕಳವು ಕೃತ್ಯ ನಡೆದಿರುವುದು ಗುರುವಾರ ಬೆಳಿಗ್ಗೆ ಗೊತ್ತಾಗಿದೆ.
ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಶಾಖೆ ಕಾರ್ಯಾಚರಿಸುತ್ತಿತ್ತು. ಕಟ್ಟಡದ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿತ್ತು. ಕಟ್ಟಡದ ಸುರಕ್ಷತೆ ಬಗ್ಗೆ ಮುಂಜಾಗ್ರತೆ ವಹಿಸದ ಬಗ್ಗೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.